ಥಗ್ ಲೈಫ್ ಚಿತ್ರ ತಿರಸ್ಕರಿಸುವಂತೆ ಜನತೆಗೆ ತೇಜಸ್ವಿ ಮನವಿ

Jun 19, 2025 - 12:59
 0  12
ಥಗ್ ಲೈಫ್ ಚಿತ್ರ ತಿರಸ್ಕರಿಸುವಂತೆ ಜನತೆಗೆ ತೇಜಸ್ವಿ ಮನವಿ

ಮೈಸೂರು: ಕನ್ನಡ ಭಾಷೆ ಬಗ್ಗೆ ಅಪಮಾನ ಮಾಡಿದ ತಮಿಳು ನಟ ಕಮಲ್ ಹಾಸನ್ ಅವರ ಥಗ್ ಲೈಫ್ ಚಿತ್ರವನ್ನು ಜನತೆ ಧಿಕ್ಕರಿಸಬೇಕು ಎಂದು ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗ ಸ್ವಾಮಿ ಕೋರಿದ್ದಾರೆ

ಸುಪ್ರೀಂ ಕೋರ್ಟ್ ಆದೇಶದಂತೆ ಕರ್ನಾಟಕ ರಾಜ್ಯದಲ್ಲಿ ಥಗ್ ಲೈಫ್ ಚಿತ್ರ ಬಿಡುಗಡೆ ಆಗುತ್ತಿದೆ.

ಕಮಲ್ ಹಾಸನ್ ನಟಿಸಿ ನಿರ್ಮಿಸಿರುವ ಥಗ್ ಲೈಫ್ ಸಿನಿಮಾವನ್ನು ರಾಜ್ಯದ ಜನತೆ ವಿಕ್ಷಿಸ ಬಾರದು ಎಂದು ತೇಜಸ್ವಿ ಮನವಿ ಮಾಡಿದ್ದಾರೆ.

ಕನ್ನಡ ಭಾಷೆ ವಿಚಾರದಲ್ಲಿ ಮಾತನಾಡಿ ಕನ್ನಡಿಗರ, ಕನ್ನಡ ಪರ ಸಂಘಟನೆಗಳ ಮತ್ತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ  ಕೆಂಗಣ್ಣಿಗೆ ಗುರಿಯಾಗಿದ್ದರೂ ಕನ್ನಡಿಗರ ಕ್ಷಮೆಯಾಚನೆ ಮಾಡದೆ ಕಮಲ್ ಹಾಸನ್ ಉದ್ಧಟತನ ತೋರಿದ್ದಾರೆ.

ಚಿತ್ರದ ಬಿಡುಗಡೆಗಾಗಿ ಹೈ ಕೋರ್ಟ್ ಮೊರೆ ಹೋಗಿದ್ದ ಕಮಲ್ ಹಾಸನ್ ಹೈ ಕೋರ್ಟ್ ನ ನ್ಯಾಯಾಧೀಶ ರಿಂದಲೂ ಕೂಡ ಛೀಮಾರಿ ಹಾಕಿಸಿ ಕೊಂಡಿದ್ದರು.

ಈಗ ಸುಪ್ರೀಂ ಕೋರ್ಟ್ ಆದೇಶದಂತೆ ಕರ್ನಾಟಕ ರಾಜ್ಯದಲ್ಲಿ ಥಗ್ ಲೈಫ್ ಸಿನಿಮಾ ಬಿಡುಗಡೆ ಯಾಗುತ್ತಿದೆ.

ಈಗಾಗಲೇ ತಮಿಳುನಾಡಿನಲ್ಲಿ ಬಿಡುಗಡೆ ಆಗಿರುವ ಥಗ್ ಲೈಫ್ ಸಿನಿಮಾವನ್ನು ತಮಿಳು ನಾಡಿನ ಜನತೆ ಸಾರಾಸಗಟಾಗಿ ತಿರಸ್ಕರಿಸಿದ್ದಾರೆ.

ಕರ್ನಾಟಕ ರಾಜ್ಯ ಹೊರತು ಪಡಿಸಿ ದೇಶದಾದ್ಯಂತ ಬಿಡುಗಡೆ ಆಗಿರುವ ಥಗ್ ಲೈಫ್ ಸಿನಿಮಾ ಸಂಪೂರ್ಣ ನೆಲಕಚ್ಚಿದೆ ಎಂದು ತೇಜಸ್ವಿ ನಾಗಲಿಂಗಸ್ವಾಮಿ ತಿಳಿಸಿದ್ದಾರೆ.

ಆದ ಕಾರಣ ಕನ್ನಡ ಭಾಷೆಗೆ ಕನ್ನಡಿಗರಿಗೆ ಅಪಮಾನ ಮಾಡಿರುವ ಕಮಲ್ ಹಾಸನ್ ರ ಚಲನಚಿತ್ರ ವನ್ನು ರಾಜ್ಯದ ಜನತೆ ತಿರಸ್ಕರಿಸಬೇಕು ಎಂದು ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗ ಸ್ವಾಮಿ ಮನವಿ ಮಾಡಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456