ದೀಪೋತ್ಸವದೊಂದಿಗೆ ಶ್ರೀ ರಾಘವೇಂದ್ರ ಸ್ವಾಮಿಗಳವರ ಭವ್ಯ ಮೆರವಣಿಗೆ
ಚನ್ನರಾಯಪಟ್ಟಣ: ಗಾಂಧಿ ವೃತ್ತದಲ್ಲಿರುವ ರಾಯರ ರಂಗಮಂದಿರದಲ್ಲಿ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಶ್ರೀ ಡಾ.ಸುಭುದೇಂದ್ರ ತೀರ್ಥ ಶ್ರೀಪಾದಂಗಳವರ ಆಶೀರ್ವಾದಿಂದ ಶ್ರೀ ರಾಘವೇಂದ್ರ ಸ್ವಾಮಿಗಳವರ ಮಧ್ಯರಾದನೆಯೆಂದು ಸಂಜೆ ನೂರಾರು ಮಹಿಳೆಯರೊಂದಿಗೆ ಭವ್ಯರಥದ ಮೇಲೆ ಶ್ರೀ ರಾಘವೇಂದ್ರ ಸ್ವಾಮಿಗಳವರನ್ನು ಕೂರಿಸಿ ದೀಪೋತ್ಸವದ ಮೂಲಕ ಚನ್ನರಾಯಪಟ್ಟಣದ ಗಾಂಧಿ ವೃತ್ತದಿಂದ ಶನೇಶ್ವರ ದೇವಸ್ಥಾನ ಮಾರ್ಗವಾಗಿ ಕೆ.ಆರ್ ಸರ್ಕಲ್ ಮಾರ್ಗವಾಗಿ ಪೊಲೀಸ್ ಠಾಣೆ ಮುಖಾಂತರ ರಾಯರ ಮಂದಿರಕ್ಕೆ ಮುಕ್ತಾಯಗೊಂಡಿತು. ಉತ್ತರ ಆರಾಧನೆ ದಿನದಂದು ವಿಧಾನ ಪರಿಷತ್ ಸದಸ್ಯರಾದ ಡಾಕ್ಟರ್ ಸೂರಜ್ ರೇವಣ್ಣ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಕುಸುಮ ಬಾಲಕೃಷ್ಣ, ಮಾಜಿ ಪುರಸಭಾ ಅಧ್ಯಕ್ಷರಾದ ಬನಶಂಕರಿ ರಘು ಸೇರಿದಂತೆ ನೂರಾರು ಗಣ್ಯರು ಶ್ರೀ ರಾಘವೇಂದ್ರ ಸ್ವಾಮಿಗಳವರ ದರ್ಶನ ಪಡೆದ ಧನ್ಯರಾದರು. ರಾಘವೇಂದ್ರ ಸ್ವಾಮಿಗಳ ಆರಾಧನೆಯ ಅಂಗವಾಗಿ ಮೂರು ದಿನಗಳ ಕಾಲ ನಡೆದ ಸಂಸ್ಕೃತಿಕ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯದ ಬೆಂಗಳೂರು ಸೇರಿದಂತೆ ಹಲವಾರು ಜಿಲ್ಲೆಗಳಿಂದ ಆಗಮಿಸಿದ 150ಕ್ಕೂ ಹೆಚ್ಚು ಕಲಾವಿದರು ನೃತ್ಯ ಪ್ರದರ್ಶನ ಮಾಡುವ ಮೂಲಕ ರಾಯರ ಸೇವೆ ಮಾಡಿದರು.ಮೂರು ದಿನಗಳ ಕಾಲ ಸಹಸ್ರಾರು ಭಕ್ತರಿಗೆ ಅನ್ನದಾನವನ್ನು ಮಾಡಲಾಯಿತು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
