ನವೋದಯ ಶಿಕ್ಷಣ ಸಂಸ್ಥೆ ಹಾಗೂ ರೆಡ್ ಕ್ರಾಸ್ ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಚನ್ನರಾಯಪಟ್ಟಣ: ನವೋದಯ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಹಾಗೂ ರೆಡ್ ಕ್ರಾಸ್ ಸಂಸ್ಥೆಯಿಂದ ವಿದ್ಯಾರ್ಥಿಗಳ ನೇತ್ರ ತಪಾಸಣೆ ನೆರವೇರಿಸಿದ್ದು ಅಲ್ಲದೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದು ಸಂಸ್ಥೆಗೆ ಕೀರ್ತಿ ತಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಈ ವೇಳೆ ಹಲವು ಶಿಕ್ಷಕರು ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಿದರು. ಇದೇ ಸಂದರ್ಭದಲ್ಲಿ ಶಾಸಕರಾದ ಸಿಎನ್ ಬಾಲಕೃಷ್ಣ, ನವೋದಯ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಮುರಾರ್ಜಿ ಮಂಜಣ್ಣ, ಪ್ರಧಾನ ಕಾರ್ಯದರ್ಶಿ ಶರತ್, ಸಹ ಕಾರ್ಯದರ್ಶಿ ಸಂತೋಷ್, ನವೋದಯ ವಿದ್ಯಾ ಸಂಸ್ಥೆಯ ನಿರ್ದೇಶಕರಾದ ಕಾಳೇನಹಳ್ಳಿ ಆನಂದ್ ಕುಮಾರ್, ಪ್ರಾಂಶುಪಾಲರಾದ ಸಂಜಯ್ ಕುಮಾರ್,ಉಪ ಪ್ರಾಂಶುಪಾಲರಾದ ಸ್ವಾಗತಹಳ್ಳಿಸುರೇಶ್, ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಭರತ್ ಕುಮಾರ್, ಕಾರ್ಯದರ್ಶಿ ಜಬಿವುಲ್ಲಾ ಸೇರಿದಂತೆ ಇತರರು ಹಾಜರಿದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
