ನಶೆ ಮುಕ್ತ ಮೈಸೂರು ನಿರ್ಮಾಣದತ್ತ ಪೊಲೀಸರ ನಡೆ :- ತೇಜಸ್ವಿ ನಾಗಲಿಂಗಸ್ವಾಮಿ ಅಭಿನಂದನೆ

Feb 20, 2026 - 10:51
Feb 20, 2026 - 11:21
 0  7
ನಶೆ ಮುಕ್ತ ಮೈಸೂರು ನಿರ್ಮಾಣದತ್ತ ಪೊಲೀಸರ ನಡೆ :- ತೇಜಸ್ವಿ ನಾಗಲಿಂಗಸ್ವಾಮಿ ಅಭಿನಂದನೆ

      ಮೈಸೂರು: ನಶೆ ಮುಕ್ತ ಮೈಸೂರು ನಿರ್ಮಾಣದತ್ತ ಪೊಲೀಸರ ನಡೆ ಅಭಿನಂದನೀಯ ಎಂದು ಯುವ ನಾಯಕ ತೇಜಸ್ವಿ ನಾಗಲಿಂಗಸ್ವಾಮಿ ತಿಳಿದಿದ್ದಾರೆ.

ಕಳೆದ ಕೆಲವು ತಿಂಗಳ ಹಿಂದೆ ಮೈಸೂರಿನ ಕೆಲ ಭಾಗಗಳಲ್ಲಿ ಮಾದಕ ದ್ರವ್ಯ ಹೆಚ್ಚು ಮಾರಾಟ, ಸೇವನೆ ಮತ್ತು ಉತ್ಪಾದನಾ ಘಟಕಗಳನ್ನು ತೆರೆದಿರುವುದರ ವಿರುದ್ಧ ಕನ್ನಡ ಕ್ರಾಂತಿದಳ ಸಂಘಟನೆ ನೇತೃತ್ವದಲ್ಲಿ ವಿವಿಧ ಕನ್ನಡಪರ ಸಂಘಟನೆಗಳ ಒಕ್ಕೂಟದ ವತಿಯಿಂದ ನಶೆ ಮುಕ್ತ ಮೈಸೂರು ನಿರ್ಮಾಣ ಮಾಡುವಂತೆ ಒತ್ತಾಯಿಸಿ ಧರಣಿ ಸತ್ಯಾಗ್ರಹ ನಡೆಸಾಗಿತ್ತು.

ಇದಾದ ನಂತರ ಪೋಲಿಸ್ ಇಲಾಖೆಯು ನಿರಂತರ ಕಾರ್ಯಾಚರಣೆ ಮಾಡುತ್ತಾ ಬಂದು ಮಾದಕ ವಸ್ತುಗಳ ದಂಧೆ ಕೋರರನ್ನು ಮಟ್ಟಹಾಕುವ ಮೂಲಕ ಮೈಸೂರು ನಗರವನ್ನು ನಶೆ ಮುಕ್ತ ನಗರ ಮಾಡುವ ನಿಟ್ಟಿನಲ್ಲಿ ನಗರ ಪೋಲಿಸ್ ಇಲಾಖೆಯು ನಿರಂತರ ಕಾರ್ಯಾಚರಣೆ ಮಾಡುವ ಮೂಲಕ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತಿರುವುದು ಸಂತಸ ತಂದಿದೆ ಎಂದು ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗ ಸ್ವಾಮಿ ಮೈಸೂರು ಪೋಲಿಸ್ ಆಯ್ತರಾದ ಸಿಮಾ ಲಾಟ್ಕರ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಕನ್ನಡ ಹೋರಾಟಗಾರರು ಮಾದಕ ವಸ್ತುಗಳ ನಿರ್ಮೂಲನೆಯ ವಿಷಯದಲ್ಲಿ ಸದಾ ಪೋಲಿಸ್ ಇಲಾಖೆಯೊಂದಿಗೆ ಕೈಜೋಡಿಸಿ ಸಹಕರಿಸುವುದಾಗಿ ತೇಜಸ್ವಿ ತಿಳಿಸಿದ್ದಾರೆ.

ಹಗಲು ರಾತ್ರಿ ಎನ್ನದೆ ನಿರಂತರ ಕಾರ್ಯಾಚರಣೆ ಮಾಡುತ್ತಿರುವ ಮೈಸೂರಿನ
ಪೋಲಿಸ್ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ತೇಜಸ್ವಿ ನಾಗಲಿಂಗ ಸ್ವಾಮಿ ಅಭಿನಂದಿಸಿದ್ದಾರೆ.

What's Your Reaction?

Like Like 2
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456