ಪರಿಶಿಷ್ಟರ ಕುಂದುಕೊರತೆ ಸಭೆ 

ಪರಿಶಿಷ್ಟರ ಕುಂದುಕೊರತೆ ಸಭೆ 

ಪರಿಶಿಷ್ಟರ ಕುಂದುಕೊರತೆ ಸಭೆ 

ಕೆ.ಜಿ.ಎಫ್: ಕೆಜಿಎಫ್ ಪೊಲೀಸ್ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕುಂದುಕೊರತೆ ಸಭೆಯನ್ನು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಗುರುವಾರದಂದು ಬೆಳಿಗ್ಗೆ ನಡೆಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾAತರಾಜು ಅವರ ಅಧ್ಯಕ್ಷತೆಯಲ್ಲಿ ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕುಂದುಕೊರತೆ ಸಭೆಯಲ್ಲಿ ಚರ್ಚಿಸಲಾಯಿತು. ಈ ಸಭೆಯಲ್ಲಿ ಪೊಲೀಸ್ ಇಲಾಖೆಯ ಜೊತೆಗೆ ಇತರೆ ಇಲಾಖೆಗಳ ಅಧಿಕಾರಿಗಳು ಸಹ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾAತರಾಜು ರವರು ಸಭೆಯನ್ನುದ್ದೇಶಿಸಿ ಮಾತನಾಡಿ ಜಿಲ್ಲೆಯಲ್ಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಪ್ರಸ್ತಾಪಿಸಿರುವ ಕುಂದುಕೊರತೆಗಳನ್ನು ಕಾಲಮಿತಿಯೊಳಗೆ ಬಗೆಹರಿಸಲು ಕ್ರಮ ವಹಿಸಲು ಸೂಚನೆ ನೀಡಿದರು. ಸಭೆಯಲ್ಲಿ ಜಿಲ್ಲಾ ಜಾಗೃತಿ ಸಮಿತಿಯ ಸದಸ್ಯ ಬೆಳಮಾರನಹಳ್ಳಿ ಆನಂದ್, ಕ್ಷೇತ್ರ ಶಿಕ್ಷಣಾಧಿಕಾರಿ ಮುನಿವೆಂಕಟರಾಮಾಚಾರಿ, ನಗರಸಭೆ ವ್ಯವಸ್ಥಾಪಕ ಶಶಿಕುಮಾರ್, ತಾ.ಪಂ. ವ್ಯವಸ್ಥಾಪಕ ಅಶ್ವಥನಾರಾಯಣ, ಲೋಕೋಪಯೋಗಿ ಇಲಾಖೆಯ ಅಭಿಯಂತರ ರಾಜು, ಸಿಡಿಪಿಓ ರಾಜೇಶ್ ಮತ್ತು ಶಿವಾರೆಡ್ಡಿ, ತಾಲ್ಲೂಕು ಸಮಾಜ ಕಲ್ಯಾಣ ಅಧಿಕಾರಿ ಸೇರಿದಂತೆ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು. ಕೆಜಿಎಫ್ ಪೊಲೀಸ್ ಜಿಲ್ಲೆಯ ಸರಹದ್ದಿನಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮುಖಂಡರು, ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದ್ದರು.