ಪುನರ್ವಿಕ ಶೋರೂಮ್ ಉದ್ಘಾಟಿಸಿದ ಶಾಸಕ ಸಿ ಎನ್ ಬಾಲಕೃಷ್ಣ
ಶ್ರವಣಬೆಳಗೂಳ: ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೂಳ ಹೋಬಳಿ ಕೇಂದ್ರದಲ್ಲಿ ಮಾಳೇನಹಳ್ಳಿ ನವೀನ್ ಮಾಲಿಕತ್ವದ ಪುನರ್ವಿಕ ಫರ್ನಿಚರ್ ಶೋರೂಮ್ ಲೋಕಾರ್ಪಣೆಗೊಂಡಿತು. ಈ ಕಾರ್ಯಕ್ರಮವನ್ನು ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಎನ್ ಬಾಲಕೃಷ್ಣರವರು ಉದ್ಘಾಟಿಸಿ ಮಾತನಾಡಿ ಗ್ರಾಮಾಂತರ ಪ್ರದೇಶದ ಸಾರ್ವಜನಿಕರಿಗೆ ಅನುಕೂಲವಾಗಲಿ ಎಂಬ ದೃಷ್ಟಿಯಿಂದ ನಿಮ್ಮೂರಿನಲ್ಲಿ ಪುನರ್ವಿಕ ಶೋರೂಮ್ ಲೋಕಾರ್ಪಣೆಗೊಂಡಿದೆ ಎಂದರು. ಶ್ರವಣಬೆಳಗೂಳ ವಿಧಾನಸಭಾ ಕ್ಷೇತ್ರದ ಸಾರ್ವಜನಿಕರು ತಮಗೆ ಬೇಕಾದ ವಸ್ತುಗಳನ್ನು ಕೈಗೆಟುಕುವ ಬೆಲೆಯಲ್ಲಿ ಗೃಹ ಉಪಯೋಗಿ ವಸ್ತುಗಳನ್ನು ಖರೀದಿಸಿ, ಇದರ ಸದುಪಯೋಗ ಪಡೆಸಿಕೊಳ್ಳಬಹುದು ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಶಾಸಕ ಸಿಎನ್ ಬಾಲಕೃಷ್ಣ,ಜೆಡಿಎಸ್ ಮುಖಂಡರಾದ ಪುನರ್ವಿಕ ನವೀನ್, ಟಿಎಪಿಎಂಎಸ್ ಮಾಜಿ ಉಪಾಧ್ಯಕ್ಷರಾದ ಸಿಜೆ ಜಗದೀಶ್, ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರಾದ ಶ್ರೀಮತಿ ಅನುರಾಧ, ಲೋಹಿತ್, ಸೇರಿದಂತೆ ಇತರರು ಹಾಜರಿದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
