ಪೋಷಕರ- ಶಿಕ್ಷಕರ ಮಹಾಸಭೆ ಹಾಗೂ ಸಾವಿತ್ರಿಬಾಯಿ ಪುಲೆ ಅವರ ಜನ್ಮದಿನವನ್ನು ಆಚರಿಸಲಾಯಿತು

Jan 3, 2026 - 13:02
 0  7
ಪೋಷಕರ- ಶಿಕ್ಷಕರ ಮಹಾಸಭೆ ಹಾಗೂ ಸಾವಿತ್ರಿಬಾಯಿ ಪುಲೆ ಅವರ ಜನ್ಮದಿನವನ್ನು ಆಚರಿಸಲಾಯಿತು

    ಕಂಪ್ಲಿ ತಾಲೂಕು ಎಮ್ಮಿಗನೂರು ಗ್ರಾಮದ ಎಸ್ ಡಬ್ಲ್ಯೂ ಎಸ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರ- ಶಿಕ್ಷಕರ ಮಹಾಸಭೆ ಹಾಗೂ ಸಾವಿತ್ರಿಬಾಯಿ ಪುಲೆ ಅವರ ಜನ್ಮದಿನವನ್ನು ಆಚರಿಸಲಾಯಿತು. ಈ ವೇಳೆ ಮುಖ್ಯ ಶಿಕ್ಷಕ ಮಂಜಪ್ಪ ಹೂಗಾರ ಮಾತನಾಡಿ ಪೋಷಕರು ಶಿಕ್ಷಕರು ಪರಸ್ಪರ ವಿಚಾರ ವಿನಿಮಯ ಮಾಡಿಕೊಂಡು ಬಡ ಮಕ್ಕಳ ಆಶಾಕಿರಣವಾಗಿರುವ ಸರ್ಕಾರಿ ಶಾಲೆಗಳನ್ನು ಬೆಳೆಸಬೇಕು, ಪೋಷಕರು ತಮ್ಮ ಮಕ್ಕಳು ಕಲಿಯುವ ಶಾಲೆಯೊಂದಿಗೆ ಸಂಪರ್ಕದಲ್ಲಿದ್ದು ಮಕ್ಕಳ ಶ್ರೇಯೋಭಿವೃದ್ಧಿಗೆ ಗಮನಹರಿಸಬೇಕು, ಮಕ್ಕಳ ಚಲನವಲನ ಗಮನಿಸಿ ಉತ್ತಮ ಪ್ರಜೆಗಳನ್ನಾಗಿ ರೂಪಿಸಬೇಕು ಎಂದರು. ಈ ಸಂದರ್ಭದಲ್ಲಿ ಸಹ ಶಿಕ್ಷಕರಾದ ಜ್ಯೋತಿ, ಸಂಗಮ, ಲಕ್ಷ್ಮಿ, ಶಂಕ್ರಮ್ಮ, ವೀರೇಶ,ಮಲ್ಲೇಶ ಹಾಗೂ ಪೋಷಕರು ಹಾಜರಿದ್ದರು.

What's Your Reaction?

Like Like 2
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456