ಬಾಗಳಿ ಹಾಲು ಒಕ್ಕೂಟದ ವತಿಯಿಂದ ನೂತನ ಉಗ್ರಾಣ ಕಟ್ಟಡದ ಉದ್ಘಾಟನೆ 

May 29, 2026 - 11:16
 0  56
ಬಾಗಳಿ ಹಾಲು ಒಕ್ಕೂಟದ ವತಿಯಿಂದ ನೂತನ ಉಗ್ರಾಣ ಕಟ್ಟಡದ ಉದ್ಘಾಟನೆ 

 ಸಂತೆಮರಹಳ್ಳಿ : ಸಮೀಪದ ಬಾಗಳಿ ಹಾಲು ಉತ್ಪಾದಕರ ಒಕ್ಕೂಟದ ವತಿಯಿಂದ 2 ಲಕ್ಷ ರೂ ವೆಚ್ಚದಲ್ಲಿ ನೂತನ ಉಗ್ರಾಣ  ಕಟ್ಟಡದ ಉದ್ಘಾಟನೆಯನ್ನು  ಚಾಮುಲ್ ಅಧ್ಯಕ್ಷ ನಂಜುಂಡಸ್ವಾಮಿ ಚಾಲನೆ ನೀಡಿದರು.

ಈ ವೇಳೆಯಲ್ಲಿ ಮಾತನಾಡಿ ರೈತರು ಉತ್ತಮ ಗುಣಮಟ್ಟದ    ಹಾಲು ನೀಡುವುದರ ಜೊತೆಗೆ ಹೈನುಗಾರಿಕೆಯನ್ನು ಬಲ ಪಡಿಸಿಕೊಳ್ಳಬೇಕು ಎಂದರು.


ನಮ್ಮ ಹಾಲು ಒಕ್ಕೂಟದ ವತಿಯಿಂದ ಬರುವಂತಹ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.


ಚಾಮುಲ್ ವತಿಯಿಂದ 2 ರೂ ಸಹಾಯ ಧನ ನೀಡಿ ರೈತರ ಹೇಳಿಗೆಗಿ ಸದಾ ಬದ್ಧರಾಗಿರುತ್ತವೆ ಹಾಗೂ ರೈತರಿಗೆ ಬೇಕಾದ ಮ್ಯಾಟ್ ಹಾಗೂ ಸ್ಟಾಪ್ ಕಟರ್ ನೀಡಲಾಗುವುದು ಎಂದು ತಿಳಿಸಿದರು.

 ಗ್ರಾಮೀಣ ಭಾಗದ ರೈತರಿಗೆ ಇದೊಂದು ಆದಾಯ ಮೂಲವಾಗಿದೆ ಇದರ ಸದ್ಬಳಕೆಯನ್ನು ಪ್ರತಿಯೊಬ್ಬ ರೈತರು ಬಳಸಿಕೊಳ್ಳುವುದು ಅತ್ಯುಮೂಲವಾಗಿದೆ ಎಂದು ತಿಳಿಸಿದರು.


ಈ ಸಂದರ್ಭದಲ್ಲಿ ಚಾಮುಲ್ ನಿರ್ದೇಶಕರಾದ ಬಸವರಾಜು, ಸದಾಶಿವಮೂರ್ತಿ, ನಾಮ ನಿರ್ದೇಶಕರಾದ ಕಮರವಾಡಿ ರೇವಣ್ಣ, ಡೈರಿ ಅಧ್ಯಕ್ಷರಾದ ಕರಗಶೆಟ್ಟಿ, ವ್ಯವಸ್ಥಾಪಕ ನಿರ್ದೇಶಕರಾದ ರಾಜಕುಮಾರ್, ಡಾ ಅಮರ್, ಇ ಓ ರಾಜು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲೋಕೇಶ್ ಮುಖಂಡರಾದ ಚಂದನ್ ಪುಟ್ಟಬುದ್ದಿ, ಬಾಗಳಿ ರೇವಣ್ಣ, ಚಂದ್ರು, ಶಿವಣ್ಣ ಹಾಗೂ ಹಾಲು ಉತ್ಪಾದಕ ಸಹಕಾರ ಸಂಘದ ಸದಸ್ಯರು ಉಪಸ್ಥಿತರಿದ್ದರು.

What's Your Reaction?

like

dislike

love

funny

angry

sad

wow

suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022 Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ:08041505268 , 9686665456 #suddikiranatv #suddikiranaott