ಬೂಚೆಪಲ್ಲಿ ಪ್ರೀಮಿಯರ್ ಲೀಗ್ (ಬಿಪಿಎಲ್) ಸೀಸನ್-1 ಕ್ರಿಕೆಟ್ ಪಂದ್ಯಾವಳಿ ಯಶಸ್ವಿ
ಬೇತಮಂಗಲ: ಕ್ರಿಕೆಟ್ ಪಂದ್ಯಾವಳಿಯು ಗ್ರಾಮೀಣ ಮತ್ತು ಪಟ್ಟಣ ಪ್ರದೇಶದ ಉದಯೋನ್ಮುಖ ಕ್ರಿಕೆಟಿಗರಿಗೆ ತಮ್ಮ ಕೌಶಲ್ಯ ಪ್ರತಿಭೆಗಳನ್ನು ಪ್ರದರ್ಶಿಸಲು ಉತ್ತಮ ವೇದಿಕೆಯಾಗಿದೆ ಎಂದು ಯುವ ಮುಖಂಡ ಸಾಮ್ರಾಟ್ ಕೃಷ್ಣಮೂರ್ತಿ ತಿಳಿಸಿದರು.
ಪಟ್ಟಣದ ಸಮೀಪದ ಬೂಚೆಪಲ್ಲಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಬೂಚೆಪಲ್ಲಿ ಪ್ರೀಮಿಯಾರ್ ಲೀಗ್(ಬಿಪಿಎಲ್ ) ಸೀಸನ್- 1 ಕ್ರಿಕೆಟ್ ಪಂದ್ಯಾವಳಿ ಯಶಸ್ವಿಯಾಗಿ ನಡೆಯಿತು.
ಈ ವೇಳೆ ಗ್ರಾಮದ ಯುವ ಮುಖಂಡ ಸಾಮ್ರಾಟ್ ಕೃಷ್ಣಮೂರ್ತಿ ಮಾತನಾಡಿ, ಯುವ ಜನತೆಯನ್ನು ಕ್ರೀಡೆಯತ್ತ ಸೆಳೆಯುವುದು ಮತ್ತು ಅವರಿಗೆ ಸರಿಯಾದ ಅವಕಾಶ ಕಲ್ಪಿಸುವುದು ನಮ್ಮ ಉದ್ದೇಶವಾಗಿತ್ತು. ಸೀಸನ್-1 ರ ಯಶಸ್ಸು ಮುಂದಿನ ದಿನಗಳಲ್ಲಿ ಇನ್ನು ದೊಡ್ಡ ಮಟ್ಟದ ಪಂದ್ಯಾವಳಿ ಆಯೋಜಿಸಲು ಸ್ಫೂರ್ತಿ ನೀಡಿದೆ ಹಾಗೂ ಗ್ರಾಮೀಣ ಭಾಗದಲ್ಲಿ ಯುವಕರ ಪ್ರತಿಭೆಗಳನ್ನು ಗುರುತಿಸಲು ಈ ಟೂರ್ನಿಯನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು,
ವಿಜೇತ ತಂಡಗಳಿಗೆ ಬಹುಮಾನ ವಿತರಣೆ: ಪ್ರಥಮ ಬಹುಮಾನ ಎಲ್ಲೋ ಸೂಪರ್ ಕಿಂಗ್ಸ್ ತಂಡವು ನಗದು ಹಾಗೂ ಆಕರ್ಷಕ ಟ್ರೋಫಿಯನ್ನು ಪಡೆದುಕೊಂಡಿತು ದ್ವಿತೀಯ ಬಹುಮಾನ ಗ್ರೀನ್ ಫೈಟರ್ಸ್ ತಂಡವು ನಗದು ಹಾಗೂ ಆಕರ್ಷಕ ಟ್ರೋಫಿ ಪಡೆದು ಕೊಂಡಿತು ಈ ಮೇಲಿನ ತಂಡಗಳಿಗೆ ಗಣ್ಯರು ಬಹುಮಾನಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಸಾಮ್ರಾಟ್ ಕೃಷ್ಣಮೂರ್ತಿ, ವೆಂಕಟ್ರಾಮ್, ಚಲಪತಿ, ಶ್ರೀನಿವಾಸ್ ರೆಡ್ಡಿ, ನಾಗರಾಜ್ ರೆಡ್ಡಿ, ರಾಜೇಂದ್ರ, ವಿನೋದ್, ಕುಮಾರ್, ಸೇರಿದಂತೆ ಯುವಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
What's Your Reaction?
Like
2
Dislike
0
Love
0
Funny
0
Angry
0
Sad
0
Wow
1
