ಬ್ಲಾಸಮ್ ಹಬ್ಬ 2025-26 ಮಕ್ಕಳಿಂದ ವೈಶಿಷ್ಟ ಪೂರ್ಣವಾಗಿ ನೆರವೇರಿತು
ಕನಕಪುರ: ಡಾ ಬಿ.ಶಶಿಧರ್ ರವರ ಬ್ಲಾಸಮ್ ಶಾಲೆಯು ವಿಶಿಷ್ಟವಾದ 34ನೆಯ
ವರ್ಷದ ಸಾಂಸ್ಕೃತಿಕ ಹಬ್ಬವನ್ನು ಬಹಳ ಸಂಭ್ರಮದಿಂದ ಕನಕಪುರದ
ಡಾ.ಬಿ.ಆರ್.ಅಂಬೇಡ್ಕರ್ ಪುರಭವನದಲ್ಲಿ ಆಚರಿಸಲಾಯಿತು. ಸಂಪೂರ್ಣ ಕಾರ್ಯಕ್ರಮವನ್ನು
ಮಕ್ಕಳಿಂದ, ಮಕ್ಕಳಿಗಾಗಿ, ಮಕ್ಕಳೇ ವಿನೂತನವಾಗಿ ನಡೆಸಿಕೊಟ್ಟರು.
ಶ್ರೀ ಸಿದ್ಧಲಿಂಗೇಶ್ವರ ಎಜುಕೇಷನಲ್ ಟ್ರಸ್ಟ್ ಸಂಸ್ಥಾಪಕರಾದ ನಮ್ಮ ತಂದೆ
ಡಾ. ಬಿ. ಶಶಿಧರ್ ರವರ ಮಹದಾಸೆಯಂತೆ ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸುವ
ದೃಷ್ಟಿಯಿಂದ ಹಾಗೂ ಮಕ್ಕಳು ಪುಸ್ತಕ ಪ್ರೇಮಿಗಳಾಗಬೇಕೆಂದು ಮಕ್ಕಳಿಗಾಗಿ ಪ್ರತಿ
ವರ್ಷದಂತೆ ಈ ವರ್ಷವೂ `ಯಂಗ್ ರೀಡರ್ ಅವಾರ್ಡ್'ಗೆ ` ಪದ್ಮಶ್ರೀ ವಿಜೇತ ಕನ್ನಡಿಗರು- 2024-25 ಮತ್ತು "ಆಪರೇಷನ್ ಸಿಂಧೂರ" ಎಂಬ ವಿಷಯಗಳ ಬಗ್ಗೆ
ಸ್ಪರ್ಧೆಯನ್ನು ಏರ್ಪಡಿಸಿ ಅವರಿಗೆ ಶ್ರೀ ಸಿದ್ಧಲಿಂಗೇಶ್ವರ ಎಜುಕೇಷನಲ್ ಟ್ರಸ್ಟ್ ನ
ಛರ್ಮೆನ್ರಾದ ಡಾ|| ಶ್ವೇತಾ ಶಶಿಧರ್ ರವರು 9ನೇ ತರಗತಿಯ ಹರ್ಷಿತಾ ಎನ್ ಮತ್ತು 6ನೇ
ತರಗತಿಯ ಕಣ್ಣಯಿ ಶೆಟ್ಟಿ ಪಿ ರವರಿಗೆ ಉತ್ತಮ ಪುಸ್ತಕಗಳನ್ನು ಮತ್ತು ಪಾರಿತೋಷಕವನ್ನು ಬಹುಮಾನವಾಗಿ ವಿತರಿಸಿದರು.
ಪಠ್ಯ ಮತ್ತು ಸಹಪಠ್ಯ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು
ಅತ್ಯುತ್ತಮ ಪ್ರತಿಭೆ ತೋರಿ "ಉತ್ತಮ ಸಾಧಕಿ" ಪ್ರಶಸ್ತಿಗೆ ಭಾಜನರಾದ ಸುರಕ್ಷಾ ಸಿ ರವರನ್ನು
ಗುರುತಿಸಿ ಡಾ|| ಬಸವರಾಜೇಂದ್ರ ಮೆಡಿಕಲ್ ಟ್ರಸ್ಟ್ ವತಿಯಿಂದ ಶ್ರೀಮತಿ ಪ್ರೇಮ ಮತ್ತು ಶ್ರೀ ಮಹದೇವಪ್ಪ
ರವರು ಸನ್ಮಾನಿಸಿದರು. BGS ಗ್ಲೋಬಲ್ ಮೆಡಿಕಲ್ ಕಾಲೇಜಿನ ಪ್ಯಾಥಾಲಜಿ ತಜ್ಞರಾದ ಡಾ. ತೇಜ್ ರವರು ವಿವಿಧ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ಚಾಂಪಿಯನ್ ಸ್ಥಾನ ಗಳಿಸಿದವರನ್ನು ಸನ್ಮಾನಿಸಿದರು.
ಹತ್ತನೇ ತರಗತಿಯ ಇಂದೂಧರ ಎಸ್ ರಾಜ್ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ
ಮಾತನಾಡುತ್ತ ನಮ್ಮ ಶಾಲೆಯಲ್ಲಿ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶಾಲೆಯ
ಪ್ರಾಂಶುಪಾಲರು ಮತ್ತು ಶಿಕ್ಷಕರ ವೃಂದದವರು ಸದಾ ಸಹಕರಿಸುತ್ತಾ ಬಂದಿದ್ದಾರೆ ಎಂದು
ಹೇಳಿದರು.
9ನೇ ತರಗತಿಯ ಅಮೋಘ ಕೆ ಮಾತನಾಡುತ್ತಾ ನಮ್ಮ ಶಾಲೆಯಲ್ಲಿ ಉಚಿತವಾಗಿ
ನಡೆಸುವಂತಹ ಭರತನಾಟ್ಯ, ಸಂಗೀತ ಮತ್ತು ಚಿತ್ರಕಲೆ ತರಗತಿಗಳಿಗೆ ಸೇರಲು ಅವಕಾಶ
ಮಾಡಿಕೊಟ್ಟಿರುವ ನಮ್ಮ ಪ್ರಾಂಶುಪಾಲರಾದ ಶ್ರೀಮತಿ ಗಂಗಾಂಬಿಕಾ ಹಾಗೂ ಶಿಕ್ಷಕರ
ವೃಂದದವರಿಗೆ ಧನ್ಯವಾದವನ್ನು ಅರ್ಪಿಸಿದರು.
ಶಾಲೆಯ ವಾರ್ಷಿಕೋತ್ಸವದ ಅತಿಥಿಯಾಗಿದ್ದಂತಹ 6ನೇ ತರಗತಿಯ
ಕಣ್ಮಯಿ ಶೆಟ್ಟಿ ಪಿರವರು ಮಾತನಾಡಿ ನಮ್ಮ ಶಾಲೆಯಲ್ಲಿ ನಡೆಯುವ ಶಾಲಾ
ವಾರ್ಷಿಕೋತ್ಸವ ಮತ್ತು ಎಲ್ಲಾ ರಾಷ್ಟೀಯ ಹಬ್ಬಗಳಿಗೂ ಮಕ್ಕಳನ್ನೇ ಅತಿಥಿಗಳಾಗಿ ಆಯ್ಕೆ
ಮಾಡುತ್ತಿರುವುದು ವಿಶಿಷ್ಟವಾಗಿದೆ. ಅಂತರ ಶಾಲಾ ಮಟ್ಟದ ಚೆಸ್, ಗಾಯನ ಸ್ಪರ್ಧೆ, ಚರ್ಚಾ
ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ವಿಜ್ಞಾನ ವಸ್ತುಪ್ರದರ್ಶನ, ರಸಪ್ರಶ್ನೆ ಕಾರ್ಯಕ್ರಮಗಳಲ್ಲಿ
ಭಾಗವಹಿಸಿ ಹಲವಾರು ಪ್ರಶಸ್ತಿಗಳನ್ನು ಪಡೆಯಲು ನಮ್ಮ ಶಾಲೆಯ ಪ್ರಾಂಶುಪಾಲರು ಮತ್ತು
ಶಿಕ್ಷಕರ ವೃಂದದ ಪ್ರೋತ್ಸಾಹವೇ ಕಾರಣ ಎಂದು ಹೇಳಿದರು.
ಕಾರ್ಯಕ್ರಮದ ಮತ್ತೊಬ್ಬ ಮುಖ್ಯ ಅತಿಥಿಯಾಗಿದ್ದ ನಾಲ್ಕನೇ ತರಗತಿಯ
ದೇವಿಕಾ ವಿ ಪಿ ರವರು ಮಾತನಾಡಿ ಇಷ್ಟು ಚಿಕ್ಕ ವಯಸ್ಸಿನಲ್ಲಿಯೇ ನನಗೆ ಈ
ಅವಕಾಶವನ್ನು ಕಲ್ಪಿಸಿಕೊಟ್ಟ ಶಾಲೆಗೆ ನಾನು ಕೃತಜ್ಞನಾಗಿರುತ್ತೇನೆ ಎಂದು ಹೇಳಿದರು.
2025ನೇ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕ ಗಳಿಸಿದ
ವಿದ್ಯಾರ್ಥಿಗಳನ್ನು ಮತ್ತು ರಾಜ್ಯಪುರಸ್ಕಾರ ಪಡೆದ ವಿದ್ಯಾರ್ಥಿನಿಯರನ್ನು "ಭಾರತ ಸೇನೆಯ
ಪರಮ ವೀರರು" ಎಂಬ ಪುಸ್ತಕ ಮತ್ತು ನೆನಪಿನ ಕಾಣಿಕೆ ಕೊಟ್ಟು ಗೌರವಿಸಿದರು.
ಪಿ.ಕೆ.ಜಿ ಯಿಂದ 10ನೇ ತರಗತಿವರೆಗಿನ ಮಕ್ಕಳು ಹಿಂದೂಸ್ಥಾನಿ ಗಾಯನ, ಭರತನಾಟ್ಯ,
ನಾಟಕ, ಸೆಮಿಕ್ಲಾಸಿಕ್ ನೃತ್ಯ, ಮೈಮ್ ಹಾಗೂ ವಿವಿಧ ನೃತ್ಯಗಳ ಮೂಲಕ
ವರ್ಣರಂಜಿತ ಕಾರ್ಯಕ್ರಮಗಳನ್ನು ನೀಡಿ ಪ್ರೇಕ್ಷಕರ ಮನಸೂರೆಗೊಂಡರು. ಭಾರತದ ವಿವಿಧ ಕಲೆಗಳನ್ನು ತೋರಿಸಲಾಯಿತು. ಬ್ರಹ್ಮೋಸ್ ಸೆಲ್ಫಿ ಸ್ಟ್ಯಾಂಡ್ ಎಲ್ಲರ ಆಕರ್ಷಿತ ಕೇಂದ್ರಬಿಂದುವಾಗಿತ್ತು
10ನೇ ತರಗತಿಯ ವೈಭವ್ ವಿ ಎಲ್ಲರನ್ನು ಸ್ವಾಗತಿಸಿದರು. ಕಾವ್ಯ ಕೆ ಜಿ ಮತ್ತು ಚಂದನ ಎಸ್
ಶಾಲಾ ವರದಿ ಮಂಡಿಸಿದರು. ನಮ್ರತಾ ಎಲ್ ವಂದಿಸಿದರು. ಕಾರ್ಯಕ್ರಮವನ್ನು ತನುಶ್ರೀ ಜೆ ನಾಯಕ್, ಪುಣ್ಯಶ್ರೀ ಕೆ, ರಿಹಾನ್ ಅಲ್ಲಾಭಕ್ಷ್ ಅವಟಿ, ಹಾಗೂ ಮಾನ್ವಿತಾ ಜೆ ರವರು
ನಿರೂಪಿಸಿದರು. ಈ ಸಾಂಸ್ಕೃತಿಕ ಹಬ್ಬದ ಕಾರ್ಯಕ್ರಮಗಳ ಮಧ್ಯದಲ್ಲಿ " ಆಪರೇಷನ್ ಸಿಂಧೂರ, " ಬಗ್ಗೆ ಸವಿವರವಾದ ಮಾಹಿತಿಯನ್ನು ತಿಳಿಸಿದರು.
What's Your Reaction?
Like
2
Dislike
0
Love
0
Funny
0
Angry
0
Sad
0
Wow
0
