ಭುವನೇಶ್ವರಿ ದೇವಿಯನ್ನು ನಾಡ ದೇವತೆಯಾಗಿ ಘೋಷಣೆ ಮಾಡಲು ಮನವಿ

Dec 10, 2025 - 17:33
 0  8
ಭುವನೇಶ್ವರಿ ದೇವಿಯನ್ನು ನಾಡ ದೇವತೆಯಾಗಿ ಘೋಷಣೆ ಮಾಡಲು ಮನವಿ

   ಮೈಸೂರು: ಕರ್ನಾಟಕ ರಾಜ್ಯದ ನಾಡ ದೇವತೆಯಾಗಿ ಕನ್ನಡ ತಾಯಿ ಭುವನೇಶ್ವರಿ ದೇವಿ ಯನ್ನು ಅಧಿಕೃತವಾಗಿ ಘೋಷಣೆ ಮಾಡುವಂತೆ ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗಸ್ವಾಮಿ ಕೋರಿದ್ದಾರೆ.

ಪ್ರಸ್ತುತ ಚಾಮುಂಡೇಶ್ವರಿ ದೇವಿಯನ್ನು ನಾಡ ದೇವತೆಯಾಗಿ ಕರೆಯಲಾಗುತ್ತಿದೆ ಆದರೆ ಚಾಮುಂಡೇಶ್ವರಿ ದೇವಿಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ( ಬೀದರ್ ಇಂದ ಚಾಮರಾಜನಗರ ) ವರೆಗೂ ಹೆಚ್ಚಾಗಿ ಪೂಜಿಸುವುದು ಕಡಿಮೆ ಸುಮಾರು ನಾಲ್ಕು, ಐದು, ಜಿಲ್ಲೆಗಳಲ್ಲಿ ಹೆಚ್ಚಾಗಿ ಪೂಜಿಸುತ್ತಾರೆ.

ಅಖಂಡ ಕರ್ನಾಟಕದಾದ್ಯಂತ ಕನ್ನಡಿಗರು ಕನ್ನಡ ತಾಯಿ ಭುವನೇಶ್ವರಿ ದೇವಿ ಯನ್ನು ಪೂಜಿಸಿ ಆರಾಧಿಸುತ್ತಿದ್ದಾರೆ,ರಾಜ್ಯ ಸರ್ಕಾರ ವಿಧಾನ ಸೌಧದಲ್ಲಿ ಕನ್ನಡ ತಾಯಿ ಭುವನೇಶ್ವರಿ ದೇವಿಯ ಭವ್ಯ ಪ್ರತಿಮೆ ಯನ್ನು ಸ್ಥಾಪಿಸಿರುವುದೇ ಸಾಕ್ಷಿ ಎಂದು ಅಭಿಪ್ರಾಯಪಟ್ಟಿದ್ದಾರೆ.

ಅಲ್ಲದೆ ಈಗಾಗಲೇ ರಾಜ್ಯ ಸರ್ಕಾರ ಕರ್ನಾಟಕ ರಾಜ್ಯದ ಸಾಂಸ್ಕೃತಿಕ ನಾಯಕನಾಗಿ ವಿಶ್ವ ಗುರು ಬಸವಣ್ಣ ನವರನ್ನು ಅಧಿಕೃತವಾಗಿ ಘೋಷಣೆ ಮಾಡಿದೆ
ಆದ ಕಾರಣ ರಾಜ್ಯ ಸರ್ಕಾರ ಈ ಮೇಲಿನ ಎಲ್ಲಾ ಅಂಶಗಳನ್ನು ಸೂಕ್ಷ್ಮವಾಗಿ ಪರಿಗಣಿಸಿ ಕೂಡಲೇ ನಾಡ ದೇವತೆಯಾಗಿ ಭುವನೇಶ್ವರಿ ದೇವಿಯನ್ನು ಅಧಿಕೃತವಾಗಿ ಘೋಷಣೆ ಮಾಡಬೇಕು ಎಂದು ತೇಜಸ್ವಿ ನಾಗಲಿಂಗ ಸ್ವಾಮಿ ಒತ್ತಾಯಿಸಿದ್ದಾರೆ.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456