ಭ್ರಷ್ಟಾಚಾರ ಮುಕ್ತ ಭಾರತ ನಿರ್ಮಾಣ ಮಾಡಲು : ನಿವೃತ್ತ ನ್ಯಾ. ಸಂತೋಷ ಹೆಗಡೆ ಕರೆ

Dec 28, 2025 - 16:53
 0  121
ಭ್ರಷ್ಟಾಚಾರ ಮುಕ್ತ ಭಾರತ ನಿರ್ಮಾಣ ಮಾಡಲು : ನಿವೃತ್ತ ನ್ಯಾ. ಸಂತೋಷ ಹೆಗಡೆ ಕರೆ

ಕೆಜಿಎಫ್: ಭ್ರಷ್ಟಾಚಾರ ಮುಕ್ತ ಭಾರತ ನಿರ್ಮಾಣ ಮಾಡಲು ಸಾರ್ವಜನಿಕರು ಸಹಕಾರ ನೀಡಬೇಕು. ಎಂದು ನಗರದ ಎಸ್ ಎಸ್ ಮಹಲ್ ನಲ್ಲಿ ಪ್ರಜಾ ತತ್ವ ಮಾನವ ಹಕ್ಕುಗಳ ಫೌಂಡೇಶನ್ ಹಾಗೂ ವಾಕ್ ಸಮರ ಪತ್ರಿಕೆ 5ನೇ ವರ್ಷದ ವಾರ್ಷಿಕೋತ್ಸವ ಹಾಗೂ ಅಂತರಾಷ್ಟ್ರೀಯ ಮಾನವ ಹಕ್ಕುಗಳ ಸಂಸ್ಥಾಪನ ದಿನಾಚರಣೆಯಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಮಾಜಿ ನ್ಯಾಯಮೂರ್ತಿ ಹಾಗೂ ನಿವೃತ್ತ ಲೋಕಾಯುಕ್ತ ಸಂತೋಷ್ ಕುಮಾರ್ ಹೆಗಡೆ ನವ ಸಮಾಜ ನಿರ್ಮಾಣ ಮಾಡಲು. ಭ್ರಷ್ಟಾಚಾರ ಮುಕ್ತ ಭಾರತ ನಿರ್ಮಾಣ ಮಾಡಲು ಪ್ರತಿಯೊಬ್ಬ ನಾಗರಿಕರ ಆದ್ಯ ಕರ್ತವ್ಯ. ಈಗಿನ ಸಮಾಜದಲ್ಲಿ ನಾವು ಎಷ್ಟೇ ಪ್ರಯತ್ನ ಪಟ್ಟರು. ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಮುಕ್ತ ವನ್ನು ಮಾಡಲು ಸಾಧ್ಯವಾಗುತ್ತಿಲ್ಲ. ಇದಕ್ಕೆ ಪ್ರಮುಖ ಕಾರಣ ನಮ್ಮ ಉದಾಸೀನ ಮನೋಭಾವ. 

ಯಾವುದೇ ಕಚೇರಯಲ್ಲಿ ಭ್ರಷ್ಟಾಚಾರ ನಮ್ಮ ಕಣ್ಣು ಮುಂದೆ ಕಂಡಾಗ ಅದನ್ನು ನಾವು ಪ್ರಶ್ನೆ ಮಾಡಬೇಕು. ನಾವು ಅದಕ್ಕೆ ಸಹಕಾರ ನೀಡಿದಾಗ ಅದು ಮತ್ತಷ್ಟು ಹೆಚ್ಚಾಗುತ್ತದೆ. ಇದಕ್ಕೆ ಕಡಿವಾಣ ಹಾಕಲು ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. ಅದರಲ್ಲಿ ಪ್ರಮುಖವಾಗಿ ಆರ್‌ಟಿಐ. ಈ ಕಾಯ್ದೆ ಅಡಿ ನಾವು ಯಾವುದೇ ಸರ್ಕಾರಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಿ ಮಾಹಿತಿಗಳನ್ನು ಪಡೆಯಬಹುದು. ಆಗ ಜನರು ಅದರಲ್ಲಿ ಏನು ಭ್ರಷ್ಟಾಚಾರ ನಡೆದಿದೆ ಎಂದು ನಾವು ಸಂಬಂಧಪಟ್ಟ ಇಲಾಖೆಗೆ ದೂರು ಸಲ್ಲಿಸಬಹುದು. ಲೋಕಾಯುಕ್ತಕ್ಕೂ ನಾವು ದೂರು ಸಲ್ಲಿಸಬಹುದು. ಆಗ ಅಂತಹ ಭ್ರಷ್ಟ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬಹುದು ಎಂದರು. 

ಒಟ್ಟಾರೆಯಾಗಿ ನಾವು ಭ್ರಷ್ಟಾಚಾರ ಮುಕ್ತ ಭಾರತ ನಿರ್ಮಾಣ ಮಾಡಲು ಸರ್ಕಾರದಿಂದ ಮಾತ್ರ ಸಾಧ್ಯವಿಲ್ಲ. ಆದ್ದರಿಂದ ಪ್ರತಿಯೊಬ್ಬ ಸಾರ್ವಜನಿಕರು ಬ್ರಷ್ಟಾಚಾರ ವಿರುದ್ಧ ಹೋರಾಡಿ ಅಂಥವರಿಗೆ ಬೆಂಬಲ ನೀಡದೆ ಇದ್ದರೆ ಮಾತ್ರ ಭ್ರಷ್ಟಾಚಾರ ನಿರ್ಮಾಣ ಮಾಡಲು ಸಾಧ್ಯ ಎಂದು ಅಭಿಪ್ರಾಯ ಪಟ್ಟರು.

ಭಾರತದಲ್ಲಿ ಅತಿ ದೊಡ್ಡ ಹಗರಣ ಎಂದರೆ ಅದು ಕಲ್ಲಿದ್ದಲು ಮತ್ತು 2ಜಿ ಹಗರಣ ಅದರಲ್ಲಿ ಲಕ್ಷಾಂತರ ಕೋಟಿ ಭ್ರಷ್ಟಾಚಾರ ಆಗಿದೆ ಇದರಿಂದ ದೇಶದ ಮಾರಕ ಆಗಿದೆ. ರಾಜಕಾರಣಿಗಳು ಮತ್ತು ಅಧಿಕಾರಕ್ಕೆ ರಾಜಕಾರಣಿಗಳು ಮತ್ತು ಅಧಿಕಾರಿಗಳು ನ್ಯಾಯಯುತ ಮಾರ್ಗದಿಂದ ಸಂಪಾದನೆ ಮಾಡಬೇಕು. ಇದರಿಂದ ಮನಸ್ಸಿಗೆ ನೆಮ್ಮದಿ ಇರುತ್ತದೆ. 

ಇಲ್ಲದಿದ್ದರೆ ಮನಸ್ಸಿನ ನೆಮ್ಮದಿ ಹಾಳಾಗುತ್ತದೆ. ಈ ಸಂದರ್ಭದಲ್ಲಿ ಶಿವಮೊಗ್ಗದ ದೂರ್ವಾಸ ಕ್ಷೇತ್ರ. ಶ್ರೀ ಜಾತವೇದ ಸುಕ್ಷ್ಮ ಮಾಲೆಯ. ಶ್ರೀ. ಶ್ರೀ. ಶ್ರೀ. ಪಲ್ಲಕ್ಕಿ ನಾರಾಯಣ ಸ್ವಾಮೀಜಿಗಳು. ದಿವ್ಯ ಸಾನಿಧ್ಯ ವಹಿಸಿದ್ದರು. ಪ್ರಜಾ ತತ್ವ ಮಾನವ ಹಕ್ಕುಗಳ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷರು. ನಾರಾಯಣ ರೆಡ್ಡಿ. ಮಾಜಿ ನಗರಸಭೆ ಅಧ್ಯಕ್ಷ ಮಾಜಿ ನಗರಸಭೆ ಅಧ್ಯಕ್ಷ ಮಹಮ್ಮದ್ ಅತ್ತಾವುಲ್ಲ. ಎಪಿಎಂಸಿ ಅಧ್ಯಕ್ಷರು.ವಿಜಯ ರಾಘವ ರೆಡ್ಡಿ. ಹಿರಿಯರು. ಕೆ. ವಿ. ವೆಂಕಟೇಶ್ನ ರೆಡ್ಡಿ. ನಿರ್ದೇಶಕರು ಹಾಗೂ ಪದಾಧಿಕಾರಿಗಳು ಭಾಗವಹಿಸಿದ್ದರು

What's Your Reaction?

Like Like 5
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456