ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

Feb 16, 2026 - 17:35
 0  1
ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

      ಇಂಡಿ: 'ಪಠ್ಯ ಪುಸ್ತಕಗಳನ್ನು ಓದಿ ಪರೀಕ್ಷೆ ಬರೆಯುವುದಕ್ಕೆ ಸೀಮಿತಗೊಳಿಸದೇ ಮಕ್ಕಳಲ್ಲಿನ ಪ್ರತಿಭೆಯನ್ನು ಪ್ರದರ್ಶಿಸಲು ವಿಜ್ಞಾನ ವಸ್ತು ಪ್ರದರ್ಶನದಂತಹ ವೇದಿಕೆ ಕಲ್ಪಿಸುವುದು ಮುಖ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಸೈಯಿದಾ ಅನ್ನಿಸ್ ಮುಜಾವರ ಹೇಳಿದರು.
         ಸೋಮವಾರದಂದು ನಗರದ ಸರಕಾರಿ ಉರ್ದು ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡ ವಿಜ್ಞಾನ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

        ಮಕ್ಕಳಿಗೆ ರಚನಾತ್ಮಕ ಮತ್ತು ಗುಣಾತ್ಮಕ ಶಿಕ್ಷಣ ದೊರೆಯಬೇಕಾದರೆ ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಳ್ಳುವುದು ಅಗತ್ಯ. ಈ ಕಾರಣದಿಂದ ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸುವ ನಿಟ್ಟಿನಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಪರಿಪೂರಕವಾಗಿದೆ ಎಂದು ಹೇಳಿದರು.
       ವಿಶ್ರಾಂತ ಪ್ರಾಚಾರ್ಯ ಬಾಬುಸಾಬ್ ಸೌದಾಗರ ಮಾತನಾಡಿ, ವಿದ್ಯಾರ್ಥಿಗಳಿಗೆ ಕಲಿಕೆಯ ಜತೆಗೆ ತಮ್ಮ ವಿಜ್ಞಾನ ಪಠ್ಯಕ್ಕೆ ಸಂಬಂಧಿಸಿದ ಮಾದರಿಗಳ ತಯಾರಿಕೆಗೆ ಪ್ರೋತ್ಸಾಹ ನೀಡುವುದರಿಂದ ಅವರಲ್ಲಿ ಜ್ಞಾನಾಭಿವೃದ್ಧಿಗೆ ಹೆಚ್ಚು ಪ್ರೇರಣೆ ಸಿಗಲಿದೆ ಎಂದು ತಿಳಿಸಿದರು.

         ಶಿಕ್ಷಕ ಸಂತೋಷ ಬಂಡೆ ಮಾತನಾಡಿ,'ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬ ಗಾದೆ ಮಾತಿನಂತೆ ವಿಜ್ಞಾನ ವಸ್ತು ಪ್ರದರ್ಶನದಿಂದ ಮಕ್ಕಳಲ್ಲಿನ ನೈಜತೆ, ಕ್ರಿಯಾತ್ಮಕ ಚಟುವಟಿಕೆ ಹಾಗೂ ಮಕ್ಕಳ ಸುಪ್ತ ಪ್ರತಿಭೆ ಅರಳುತ್ತದೆ. ಇಂದಿನ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ ಅವರಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಬೇಕಿದೆ’ ಎಂದರು.
         ಜಿಓಸಿಸಿ ಬ್ಯಾಂಕ್ ನಿರ್ದೇಶಕ ಅಲ್ಲಾಭಕ್ಷ ವಾಲೀಕಾರ, ಯುವ ಮುಖಂಡ ಜಾವೀದ ಮೊಮಿನ್ ಮಾತನಾಡಿದರು. ಹುಮಾಯೂನ್ ಬೀಳವಾರ, ಮುಜೀಬ್ ಬಾಗವಾನ, ಪತ್ರಕರ್ತರಾದ ಸದ್ದಾಂಹುಸೇನ್ ಜಮಾದಾರ, ರಾಜು ಚಾಬುಕಸವಾರ, ಉರ್ದು ಪ್ರೌಢಶಾಲೆಯ ಮುಖ್ಯ ಶಿಕ್ಷಕ ಪಾಂಡು ರಾಠೋಡ, ಇಂಡಿ ಉರ್ದು ಕ್ಲಸ್ಟರ್ ಸಿ ಆರ್ ಪಿ ಪರ್ವೇಜ್ ಪಟೇಲ್, ಸಮಾಜ ಸೇವಕ ಹಸನ ಮುಜಾವರ, ಮುಖ್ಯ ಶಿಕ್ಷಕ ಯಾಸೀನ್ ತುರ್ಕಿ, ಶಾಕೀರ್ ನಾಗೂರ, ಎಸ್ ಎಸ್ ಅರಬ, ಎ ಎ ಇಂಡೀಕರ, ಎನ್ ಎಸ್ ದೇವರ, ಗೌರಮ್ಮ ನಿಡಗುಂದಿ, ಅತಿಥಿ ಶಿಕ್ಷಕ ರಾದ ಯಾಸ್ಮಿನ್ ಅರಬ, ಅಫ್ತಾಬ್ ತುರ್ಕಿ, ಮಿಶ್ಬಾ ನಾಗಠಾಣ, ರುಬಿನಾ ಮಕಾನದಾರ, ಮಿಶ್ಬಾ ಇಂಡಿ ಸೇರಿದಂತೆ ಮಕ್ಕಳು ಭಾಗವಹಿಸಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456