ಮಹಿಳೆಯರಿಗಾಗಿ ರಾಜ್ಯಮಟ್ಟದ ಗಾಯನ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭ
ಮಹಿಳೆಯರಿಗಾಗಿ ರಾಜ್ಯಮಟ್ಟದ ಗಾಯನ ಸ್ಪರ್ಧೆ ಯ ಅಂತಿಮ ಸುತ್ತು ಹಾಗೂ ಬಹುಮಾನ ವಿತರಣಾ ಸಮಾರಂಭ :
ಬೆಂಗಳೂರು:28.2.2026 ಶನಿವಾರ ಸಂಜೆ 4 ಗಂಟೆಗೆ ನಯನ ಸಭಾಂಗಣದಲ್ಲಿ.
ಪರಂಪರಾ ಕಲ್ಚರಲ್ ಫೌಂಡೇಶನ್ ವತಿಯಿಂದ
ಇದೇ ಶನಿವಾರ 28.2.26 ರಂದು ನಗರದ ನಯನ ಸಭಾಂಗಣದಲ್ಲಿ ಮಹಿಳೆಯರಿಗಾಗಿ ರಾಜ್ಯಮಟ್ಟದ ಗಾಯನ ಸ್ಪರ್ಧೆ ನಡೆಯಲಿದೆ.
ಮೊದಲ ಸುತ್ತಿನ ಸ್ಪರ್ಧೆಯಲ್ಲಿ ಆಯ್ಕೆಯಾದ ಸ್ಪರ್ಧಿಗಳು ಈ ಸುತ್ತಿನಲ್ಲಿ ಭಾಗವಹಿಸಲಿದ್ದು, ವಿಜೇತರಾದವರಿಗೆ ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದು.
ಸಾರಿಗೆ ಮತ್ತು ಮುಜರಾಯಿ ಖಾತೆ ಸಚಿವರಾದ ರಾಮಲಿಂಗಾರೆಡ್ಡಿ ಬಹುಮಾನ ವಿತರಿಸಲಿದ್ದು, ಸಮಾರಂಭದಲ್ಲಿ ಬಿಬಿಎಂಪಿ ಅರೋಗ್ಯ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷರಾದ ಎಂ.ಮುನಿರಾಜು, ಅನನ್ಯ ಕಲ್ಚರಲ್ ಅಕಾಡೆಮಿಯ ಮ್ಯಾನೇಜಿಂಗ್ ಟ್ರಸ್ಟಿ ಡಾ.ಅರ್.ವಿ.ರಾಘವೇಂದ್ರ, ನಾಟ್ಯ ಕುಸುಮಾಂಜಲಿ ಸಾಂಸ್ಕೃತಿಕ ವೇದಿಕೆಯ ಡಿ.ಶ್ರೀನಾಥ್, ಸರಸ್ವತಿ ನೃತ್ಯ ಕಲಾಕೇಂದ್ರದ ವಿದ್ವಾನ್ ಎಸ್. ಮಂಜುನಾಥ್ ರಾಮಸಾಗರ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ನೃತ್ಯ ಗುರುಗಳಾದ ಗೀತಾ ಶ್ರೀನಾಥ್, ವಸುಂಧರಾ ಎನ್.ದೇವರಾಜ್ ಹಾಗೂ ಸಂಗಮೇಶ್ವರ ವಿದ್ಯಾಲಯದ ಸಂಸ್ಥಾಪಕ ಸೋ.ಫಾಲನೇತ್ರ ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದಾರೆ.
ಪರಂಪರಾ ಸಂಸ್ಥೆಯ ಅಧ್ಯಕ್ಷ ಜಿ ಪಿ ರಾಮಣ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ವಂದನೆಗಳೊಂದಿಗೆ
ಜಿ ಪಿ ರಾಮಣ್ಣ
ಅಧ್ಯಕ್ಷ
ಪರಂಪರಾ ಕಲ್ಚರಲ್ ಫೌಂಡೇಶನ್
9448202708
paramparagpr@gmail.com
What's Your Reaction?
Like
2
Dislike
0
Love
0
Funny
0
Angry
0
Sad
0
Wow
0
