ಮಾಣಿಕ್ಯ ಪ್ರಕಾಶನದ ೨೦೨೬ ನೇ ಸಾಲಿನ ರಾಜ್ಯಮಟ್ಟದ ವಿವಿಧ ದತ್ತಿ ಪ್ರಶಸ್ತಿಗಳಿಗೆ ಕೃತಿಗಳ ಆಹ್ವಾನ

Mar 3, 2026 - 13:20
 0  8
ಮಾಣಿಕ್ಯ ಪ್ರಕಾಶನದ ೨೦೨೬ ನೇ ಸಾಲಿನ ರಾಜ್ಯಮಟ್ಟದ ವಿವಿಧ ದತ್ತಿ ಪ್ರಶಸ್ತಿಗಳಿಗೆ ಕೃತಿಗಳ ಆಹ್ವಾನ

      ಹಾಸನ: ಹಾಸನದ ಮಾಣಿಕ್ಯ ಪ್ರಕಾಶನ (ರಿ.), ಸಂಸ್ಥೆಯು ೨೦೧೫ ರಿಂದಲೂ ವೈವಿಧ್ಯಮಯ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದ್ದು, ಸಾಹಿತಿಗಳಿಗೆ ಪ್ರೋತ್ಸಾಹ ನೀಡುವ ಹಿನ್ನೆಲೆಯಲ್ಲಿ ಈಗಾಗಲೇ ರಾಜ್ಯದ ವಿವಿಧ ಲೇಖಕರ ೯೦ ಕ್ಕೂ ಹೆಚ್ಚು ಕೃತಿಗಳನ್ನು ಮುದ್ರಣ ಮಾಡಿ ಕನ್ನಡ ಸಾರಸ್ವತ ಲೋಕಕ್ಕೆ ನೀಡುವುದರ ಜೊತೆಗೆ ದಾನಿಗಳ ಸಹಕಾರದಲ್ಲಿ ವಿವಿಧ ಪ್ರಕಾರದ ಸಾಹಿತ್ಯ ಕೃತಿಗಳಿಗೆ ದತ್ತಿ ಪುರಸ್ಕಾರ ನೀಡಿ ಗೌರವಿಸುತ್ತಿದೆ. ಈ ನಿಟ್ಟಿನಲ್ಲಿ ೨೦೨೬ ರ ದತ್ತಿ ಪುರಸ್ಕಾರಗಳಿಗೆ ೨೦೨೫ ರಲ್ಲಿ ಮೊದಲ ಮುದ್ರಣವಾಗಿ ಪ್ರಕಟಗೊಂಡ ವಿವಿಧ ಪ್ರಕಾರದ ಕೃತಿಗಳನ್ನು ಈ ಕೆಳಕಂಡ ದತ್ತಿ ಪ್ರಶಸ್ತಿಗಳಿಗೆ ಆಹ್ವಾನಿಸಲಾಗಿದೆ ಎಂದು ಪ್ರಕಾಶಕಿ ದೀಪಾ ಉಪ್ಪಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

    ಆಸಕ್ತ ಲೇಖಕರು ಸಂಬಂಧಪಟ್ಟ ದತ್ತಿಗಳಿಗೆ ನಿಗದಿತ ಪ್ರಕಾರದ ಮೂರು ಕೃತಿಗಳನ್ನು ಹಾಗೂ ಸ್ವವಿವರಗಳೊಂದಿಗೆ ೨೦೨೬ ಮಾರ್ಚಿ ೩೧ ರೊಳಗೆ ಪ್ರಕಾಶಕರು, ಮಾಣಿಕ್ಯ ಪ್ರಕಾಶನ, #೪೦, ಸಾಹಿತ್ಯ ಸೌಧ, ಮುಖ್ಯರಸ್ತೆ, ಕೆಂಪೇಗೌಡ ಲೇಔಟ್, ಹಾಸನಾಂಬ ನಗರ ಎದುರು, ಸಾಲಗಾಮೆ ರಸ್ತೆ, ಹಾಸನ – ೫೭೩೨೧೯, ಮೊ-೯೭೩೯೮೭೮೧೯೭ ತಲುಪುವಂತೆ ಕಳುಹಿಸಿಕೊಡಲು ತಿಳಿಸಿದೆ. ಸ್ಪರ್ಧೆಗೆ ಬಂದ ಕೃತಿಗಳನ್ನು ಹಿಂತಿರುಗಿಸಲಾಗುವುದಿಲ್ಲ ಹಾಗೂ ನಿಗದಿತ ದಿನಾಂಕದ ನಂತರ ಬಂದ ಕೃತಿಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುವುದಿಲ್ಲ.

ದಿ. ಸಿ. ಪಿ. ನಾರಾಯಣಚಾರ್ಯ ಸ್ಮಾರಕ ದತ್ತಿ - ಕಾವ್ಯ ಮಾಣಿಕ್ಯ ಪ್ರಶಸ್ತಿ ೨೦೨೬ (ಕಾವ್ಯ ವಿಭಾಗ)

      ಕವಯಿತ್ರಿ ಸಿ. ಎನ್. ನೀಲಾವತಿ ಕೊಡಮಾಡುವ ದಿ. ಸಿ. ಪಿ. ನಾರಾಯಣಚಾರ್ಯ ಸ್ಮಾರಕ ದತ್ತಿ – ಕಾವ್ಯ ಮಾಣಿಕ್ಯ ಪ್ರಶಸ್ತಿ ೨೦೨೬ ಕ್ಕೆ ೨೦೨೫ ರಲ್ಲಿ ಮೊದಲ ಮುದ್ರಣವಾಗಿ ಪ್ರಕಟಗೊಂಡ ಕವನ ಸಂಕಲನಗಳನ್ನು ಆಹ್ವಾನಿಸಲಾಗಿದೆ. ಆಯ್ಕೆಯಾದ ಅತ್ಯುತ್ತಮ ಎರಡು ಕೃತಿಗಳಿಗೆ ಪ್ರಥಮ ೩೦೦೦ ರೂ ನಗದು ಮತ್ತು ಪ್ರಶಸ್ತಿ ಫಲಕ ಹಾಗೂ ದ್ವಿತೀಯ ೨೫೦೦ ರೂ ನಗದು ಮತ್ತು ಪ್ರಶಸ್ತಿ ಫಲಕ ನೀಡಿ ಗೌರವಿಸಲಾಗುತ್ತದೆ. 
     
ಎನ್. ಶೈಲಜಾ ಹಾಸನ ದತ್ತಿ - ಪ್ರಬಂಧ ಮಾಣಿಕ್ಯ ಪ್ರಶಸ್ತಿ ೨೦೨೬ (ಲಲಿತ ಪ್ರಬಂಧ ವಿಭಾಗ)

      ಹಿರಿಯ ಸಾಹಿತಿ ಎನ್. ಶೈಲಜಾ ಹಾಸನ ಹೆಸರಲ್ಲಿ ಕೊಡಮಾಡುವ ಎನ್. ಶೈಲಜಾ ಹಾಸನ ದತ್ತಿ - ಪ್ರಬಂಧ ಮಾಣಿಕ್ಯ ಪ್ರಶಸ್ತಿ ೨೦೨೬ ಕ್ಕೆ ೨೦೨೫ ರಲ್ಲಿ ಮೊದಲ ಮುದ್ರಣವಾಗಿ ಪ್ರಕಟಗೊಂಡ ಲಲಿತ ಪ್ರಬಂಧ ಸಂಕಲನಗಳನ್ನು ಆಹ್ವಾನಿಸಲಾಗಿದೆ. ಆಯ್ಕೆಯಾದ ಅತ್ಯುತ್ತಮ ಒಂದು ಕೃತಿಗೆ ೩೦೦೦ ರೂ ನಗದು ಹಾಗೂ ಪ್ರಶಸ್ತಿ ಫಲಕ ನೀಡಿ ಗೌರವಿಸಲಾಗುತ್ತದೆ.

ದಿ. ನಿಂಗಪ್ಪ ಮಲ್ಲಪ್ಪ ಮೇಟಿ ಸ್ಮಾರಕ ದತ್ತಿ – ಸಂಶೋಧನಾ ಮಾಣಿಕ್ಯ ಪ್ರಶಸ್ತಿ ೨೦೨೬ (ಸಂಶೋಧನಾ ವಿಭಾಗ)

ಮುಂಬಯಿ ಸಾಹಿತಿ ವಿಶ್ವೇಶ್ವರ ಎನ್. ಮೇಟಿ ಅವರು ಕೊಡಮಾಡುವ ದಿ. ನಿಂಗಪ್ಪ ಮಲ್ಲಪ್ಪ ಮೇಟಿ ಸ್ಮಾರಕ ದತ್ತಿ – ಸಂಶೋಧನಾ ಮಾಣಿಕ್ಯ ಪ್ರಶಸ್ತಿ ೨೦೨೬ ಕ್ಕೆ ೨೦೨೫ ರಲ್ಲಿ ಮೊದಲ ಮುದ್ರಣವಾಗಿ ಪ್ರಕಟಗೊಂಡ ಸ್ವತಂತ್ರ ಸಂಶೋಧನಾ ಕೃತಿಗಳನ್ನು ಆಹ್ವಾನಿಸಲಾಗಿದೆ. ಆಯ್ಕೆಯಾದ ಒಂದು ಅತ್ಯುತ್ತಮ ಕೃತಿಗೆ ೩೦೦೦ ರೂ ನಗದು, ಪ್ರಶಸ್ತಿ ಫಲಕ ನೀಡಿ ಗೌರವಿಸಲಾಗುತ್ತದೆ.

ದಿ. ದೊಡ್ಡ ಚಂದಪ್ಪ ತಳ್ಳಿ ಪಾಟೀಲ ಸ್ಮಾರಕ ದತ್ತಿ – ವಚನ ಮಾಣಿಕ್ಯ ಪ್ರಶಸ್ತಿ ೨೦೨೬ (ವಚನ ಸಾಹಿತ್ಯ ವಿಭಾಗ)

ಮುಂಬಯಿ ಹಿರಿಯ ಸಾಹಿತಿ ಡಾ. ಅಮರೇಶ ಪಾಟೀಲ ಅವರು ಕೊಡಮಾಡುವ ದಿ. ದೊಡ್ಡ ಚಂದಪ್ಪ ತಳ್ಳಿ ಪಾಟೀಲ ಸ್ಮಾರಕ ದತ್ತಿ – ವಚನ ಮಾಣಿಕ್ಯ ಪ್ರಶಸ್ತಿ ೨೦೨೬ ಕ್ಕೆ ೨೦೨೫ ರಲ್ಲಿ ಮೊದಲ ಮುದ್ರಣವಾಗಿ ಪ್ರಕಟಗೊಂಡ ಆಧುನಿಕ ವಚನ ಸಂಕಲನ / ವಚನ ವಿಮರ್ಶೆ / ಶರಣ ಸಾಹಿತ್ಯಕ್ಕೆ ಸಂಬಂಧಪಟ್ಟ ಕೃತಿಗಳನ್ನು ಆಹ್ವಾನಿಸಲಾಗಿದೆ. ಆಯ್ಕೆಯಾದ ಒಂದು ಅತ್ಯುತ್ತಮ ಕೃತಿಗೆ ೩೦೦೦ ರೂ ನಗದು, ಪ್ರಶಸ್ತಿ ಫಲಕ ನೀಡಿ ಗೌರವಿಸಲಾಗುತ್ತದೆ.

ಪ್ರಭಾವತಿ ಶೆಡ್ತಿ ದತ್ತಿ – ನಾಟಕ ಮಾಣಿಕ್ಯ ಪ್ರಶಸ್ತಿ ೨೦೨೬ (ನಾಟಕ ವಿಭಾಗ)

ಹಿರಿಯ ಸಾಹಿತಿ ಪ್ರಭಾವತಿ ಶಡ್ತಿ ಹೆಸರಲ್ಲಿ ಕೊಡಮಾಡುವ ಪ್ರಭಾವತಿ ಶೆಡ್ತಿ ದತ್ತಿ – ನಾಟಕ ಮಾಣಿಕ್ಯ ಪ್ರಶಸ್ತಿ ೨೦೨೬ ಕ್ಕೆ ೨೦೨೫ ರಲ್ಲಿ ಮೊದಲ ಮುದ್ರಣವಾಗಿ ಪ್ರಕಟಗೊಂಡ ಕನ್ನಡ ನಾಟಕ ಸ್ವತಂತ್ರ ಕೃತಿಗಳನ್ನು ಆಹ್ವಾನಿಸಲಾಗಿದೆ. ಆಯ್ಕೆಯಾದ ಒಂದು ಅತ್ಯುತ್ತಮ ಕೃತಿಗೆ ೩೦೦೦ ರೂ ನಗದು, ಪ್ರಶಸ್ತಿ ಫಲಕ ನೀಡಿ ಗೌರವಿಸಲಾಗುತ್ತದೆ.

ದಿ. ಫೆಲಿಕ್ಸ್ ಅಲ್ಬುಕರ್ಕ್ ಮಡಂತ್ಯಾರ್ ಸ್ಮಾರಕ ದತ್ತಿ – ಕಾದಂಬರಿ ಮಾಣಿಕ್ಯ ಪ್ರಶಸ್ತಿ ೨೦೨೬ (ಕಾದಂಬರಿ ವಿಭಾಗ)

ಸಾಹಿತಿ ಫ್ಲಾವಿಯಾ ಅಲ್ಬುಕರ್ಕ್ ಪುತ್ತೂರು ಅವರು ಕೊಡಮಾಡುವ ದಿ. ಫೆಲಿಕ್ಸ್ ಅಲ್ಬುಕರ್ಕ್ ಮಡಂತ್ಯಾರ್ ಸ್ಮಾರಕ ದತ್ತಿ – ಕಾದಂಬರಿ ಮಾಣಿಕ್ಯ ಪ್ರಶಸ್ತಿ ೨೦೨೬ ಕ್ಕೆ ೨೦೨೫ ರಲ್ಲಿ ಮೊದಲ ಮುದ್ರಣವಾಗಿ ಪ್ರಕಟಗೊಂಡ ಕನ್ನಡ ಕಾದಂಬರಿ ಸ್ವತಂತ್ರ ಕೃತಿಗಳನ್ನು ಆಹ್ವಾನಿಸಲಾಗಿದೆ. ಆಯ್ಕೆಯಾದ ಒಂದು ಅತ್ಯುತ್ತಮ ಕೃತಿಗೆ ೨೫೦೦ ರೂ ನಗದು, ಪ್ರಶಸ್ತಿ ಫಲಕ ನೀಡಿ ಗೌರವಿಸಲಾಗುತ್ತದೆ.

ದಿ. ಫಾತಿಮಾಭಿ ಜನಾಬ್ ಸೈಯದ್ ಅಬ್ದುಲ್ ಘನೀ ಸಾಬ್ ಸ್ಮಾರಕ ದತ್ತಿ - ಗಜಲ್ ಮಾಣಿಕ್ಯ ಪ್ರಶಸ್ತಿ ೨೦೨೬ (ಗಜಲ್ ವಿಭಾಗ)

ಹಿರಿಯ ಸಾಹಿತಿ ಡಾ. ಹಸೀನಾ ಎಚ್. ಕೆ. ಅವರು ಕೊಡಮಾಡುವ ದಿ. ಫಾತಿಮಾಭಿ ಜನಾಬ್ ಸೈಯದ್ ಅಬ್ದುಲ್ ಘನೀ ಸಾಬ್ ಸ್ಮಾರಕ ದತ್ತಿ ಗಜಲ್ ಮಾಣಿಕ್ಯ ಪ್ರಶಸ್ತಿ ೨೦೨೬  ಕ್ಕೆ ೨೦೨೫ ರಲ್ಲಿ ಮೊದಲ ಮುದ್ರಣವಾಗಿ ಪ್ರಕಟಗೊಂಡ ಕನ್ನಡ ಗಜಲ್ ಸ್ವತಂತ್ರ ಕೃತಿಗಳನ್ನು ಆಹ್ವಾನಿಸಲಾಗಿದೆ. ಆಯ್ಕೆಯಾದ ಒಂದು ಅತ್ಯುತ್ತಮ ಕೃತಿಗೆ ೨೫೦೦ ರೂ ನಗದು, ಪ್ರಶಸ್ತಿ ಫಲಕ ನೀಡಿ ಗೌರವಿಸಲಾಗುತ್ತದೆ.

ಕೊಣನೂರು ಅಣ್ಣಯ್ಯ ದತ್ತಿ – ಕಥಾ ಮಾಣಿಕ್ಯ ಪ್ರಶಸ್ತಿ ೨೦೨೬ (ಕಥಾ ವಿಭಾಗ)

     ಕವಯಿತ್ರಿ ಕೆ.ಸಿ. ಗೀತಾ ಸುರೇಶ್ ಕೊಡಮಾಡುವ ಕೊಣನೂರು ಅಣ್ಣಯ್ಯ ದತ್ತಿ – ಕಥಾ ಮಾಣಿಕ್ಯ ಪ್ರಶಸ್ತಿ ೨೦೨೬ ಕ್ಕೆ ೨೦೨೫ ರಲ್ಲಿ ಮೊದಲ ಮುದ್ರಣವಾಗಿ ಪ್ರಕಟಗೊಂಡ ಸ್ವತಂತ್ರ ಕಥಾ ಸಂಕಲನಗಳನ್ನು ಆಹ್ವಾನಿಸಲಾಗಿದೆ. ಆಯ್ಕೆಯಾದ ಅತ್ಯುತ್ತಮ ಒಂದು ಕೃತಿಗೆ ೨೫೦೦ ರೂ ನಗದು, ಪ್ರಶಸ್ತಿ ಫಲಕ ನೀಡಿ ಗೌರವಿಸಲಾಗುತ್ತದೆ.

ಕೆ. ವೈ. ಕಂದಕೂರ ದತ್ತಿ – ಚುಟುಕು ಮಾಣಿಕ್ಯ ಪ್ರಶಸ್ತಿ ೨೦೨೬ (ಚುಟುಕು / ಹನಿಗವಿತೆ ವಿಭಾಗ)

     ಹಿರಿಯ ಸಾಹಿತಿ ರೇಷ್ಮಾ ಕಂದಕೂರ ಕೊಡಮಾಡುವ ಕೆ. ವೈ. ಕಂದಕೂರ ದತ್ತಿ – ಚುಟುಕು ಮಾಣಿಕ್ಯ ಪ್ರಶಸ್ತಿ ೨೦೨೬ ಕ್ಕೆ ೨೦೨೫ ರಲ್ಲಿ ಮೊದಲ ಮುದ್ರಣವಾಗಿ ಪ್ರಕಟಗೊಂಡ ಸ್ವತಂತ್ರ ಚುಟುಕು ಸಂಕಲನಗಳನ್ನು ಆಹ್ವಾನಿಸಲಾಗಿದೆ. ಆಯ್ಕೆಯಾದ ಅತ್ಯುತ್ತಮ ಒಂದು ಕೃತಿಗೆ ೨೫೦೦ ರೂ ನಗದು, ಪ್ರಶಸ್ತಿ ಫಲಕ ನೀಡಿ ಗೌರವಿಸಲಾಗುತ್ತದೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456