ಮಾರ್ಗೋನಹಳ್ಳಿ ಗ್ರಾಮಸ್ಥರಿಂದ ಪೋಲೀಸ್ ಠಾಣೆ ಎದುರು ಪ್ರತಿಭಟನೆ

Sep 19, 2025 - 16:00
 0  8
ಮಾರ್ಗೋನಹಳ್ಳಿ ಗ್ರಾಮಸ್ಥರಿಂದ ಪೋಲೀಸ್ ಠಾಣೆ ಎದುರು ಪ್ರತಿಭಟನೆ

ಗ್ರಾಮಸ್ಥರ ಮೇಲೆ ಪೊಲೀಸರಿಂದ ಅಕ್ರಮ FIR ಹಿನ್ನಲೆ.ಪೊಲೀಸರ ವಿರುದ್ದ ಸಿಡಿದೆದ್ದ ಗ್ರಾಮರಿಂದ ಠಾಣೆಗೆ ಮುತ್ತಿಗೆ.ಪೊಲೀಸ್ ಠಾಣೆ ಮುಂದೆ ಅನಿರ್ದಿಷ್ಟಾವಧಿ ಧರಣಿ ಕುಳಿತ ಗ್ರಾಮಸ್ಥರು.ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಕಿಕ್ಕೇರಿ ಗ್ರಾಮದಲ್ಲಿ ಘಟನೆ.

ಕಿಕ್ಕೇರಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಠಾಣೆ ಮುಂದೆ ಧರಣಿ ಕುಳಿತ ಮಾರ್ಗೋನಹಳ್ಳಿ ಗ್ರಾಮಸ್ಥರು.ಇತ್ತೀಚೆಗೆ ಗ್ರಾಮದ ಸರ್ಕಾರಿ ಗೋಮಾಳ ಜಾಗದ ವಿರುದ್ದ ಗ್ರಾಮಸ್ಥರು ಹೋರಾಟ ಮಾಡಿದ್ರು.


90 ಎಕರೆ ಸರ್ಕಾರಿ ಗೋಮಾಳದ ಜಾಗವನ್ನು ಪೊಲೀಸ್ ಅಧಿಕಾರಿ ಅಕ್ರಮವಾಗಿ ಖಾತೆ ಮಾಡಿಸಿಕೊಂಡಿದ್ರು.ಇದರ ವಿರುದ್ಧ ಇಡೀ ಗ್ರಾಮದ ಜನರು ಒಗ್ಗಟ್ಟಾಗಿ ಪ್ರತಿಭಟನೆ ಮಾಡಿದ್ರು.ಜನರ ಪ್ರತಿಭಟನೆ ಹತ್ತಿಕ್ಕಲು ಪೊಲೀಸ್ ಅಧಿಕಾರಿ ತನ್ನ ಪ್ರಭಾವ ಬಳಿಸಿ ಗ್ರಾಮದ 32 ಜನರ ಮೇಲೆ FIR ಹಾಕಿಸಿದ್ದ.FIR ಹಾಕಿದ್ದರ ವಿರುದ್ದ ತಿರುಗಿ ಬಿದ್ದ ಗ್ರಾಮಸ್ಥರಿಗೆ ಶಾಸಕರ ಸಮ್ಕುಖದಲ್ಲಿ ಸಂಧಾನ ಮಾಡಿ B ರಿಪೋರ್ಟ್ ಹಾಕುವ ಬಗ್ಗೆ DYSP ಭರವಸೆ.ಆದ್ರೆ ಈ ಬಗ್ಗೆ ಇದುವರೆಗೂ ಪ್ರಕರಣ ಬಿ ರಿಪೋರ್ಟ್ ಹಾಕದ್ದಕ್ಕೆ ರೊಚ್ಚಿಗೆದ್ದ ಗ್ರಾಮಸ್ಥರು..ಇಂದು ಇಡೀ ಗ್ರಾಮದ ಜನರು ಕಿಕ್ಕೇರಿಗೆ ಬಂದು ಪ್ರತಿಭಟನೆ ನಡೆಸಿ ಠಾಣೆ ಮುಂದೆ ಮೌನ ಅನಿರ್ದಿಷ್ಟಾವಧಿ ಧರಣಿ.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456