"ರಘು ಕೌಟಿಲ್ಯರವರು ತಳಮಟ್ಟದ ನಿಷ್ಠಾವಂತ ಕಾರ್ಯಕರ್ತರು"

"ರಘು ಕೌಟಿಲ್ಯರವರು ತಳಮಟ್ಟದ ನಿಷ್ಠಾವಂತ ಕಾರ್ಯಕರ್ತರು"

"ರಘು ಕೌಟಿಲ್ಯರವರು ತಳಮಟ್ಟದ ನಿಷ್ಠಾವಂತ ಕಾರ್ಯಕರ್ತರು"

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಹೊಸ ಶಕೆ ಆರಂಭಗೊಂಡಿದ್ದು ಮಾಜಿ ಮುಖಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿ ಮುಂದೆ ಸಾಗುವ ರಾಜ್ಯಾಧ್ಯಕ್ಷರಾದ ಶ್ರೀ ಬಿ.ವೈ.ವಿಜಯೇಂದ್ರರವರ ನಾಯಕತ್ವದಲ್ಲಿ ಎಲ್ಲಾ ವರ್ಗಗಳ ಸಂಘಟನೆಗೆ  ಅವರು ಆನೆ ಬಲ ತುಂಬುತ್ತಿದ್ದಾರೆ. ಜಗನ್ನಾಥ ಭವನದ ಬಿಜೆಪಿ ಕೇಂದ್ರ ಕಛೇರಿಯಲ್ಲಿ ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ, ರಾಜ್ಯ ಕಾರ್ಯಕಾರಿಣಿ  ಸದಸ್ಯರಾಗಿ ಅಧಿಕಾರ ಸ್ವೀಕರಿಸಿದ ಶ್ರೀಮತಿ ಸುಗುಣಾ ಕೃಷಪ್ಪನವರು ಅವರು  ಮಾತನಾಡಿ ಬಿಜೆಪಿ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷರಾದ ರಘು ಕೌಟಿಲ್ಯರವರು ತಳಮಟ್ಟದ ನಿಷ್ಠಾವಂತ ಕಾರ್ಯಕರ್ತರನ್ನು ಗುರುತಿಸಿ ಜವಾಬ್ದಾರಿ ನೀಡುತ್ತಿರುವುದು ಸಂತಸ ತಂದಿದೆ. ಪಕ್ಷದ ಬಲವರ್ಧನೆಗೆ ಹಾಗೂ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಲು ಕಾರ್ಯಕರ್ತರು ಅತ್ಯುತ್ಸಾಹದಲ್ಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರನ್ನು ಮೂರನೇ ಬಾರಿಗೆ ಪ್ರಧಾನಿಯನ್ನಾಗಿ ಮಾಡುವ ಏಕೈಕ ಗುರಿ ಬಿಜೆಪಿ ಕಾರ್ಯಕರ್ತರದ್ದಾಗಿದೆ ಎಂದು ತಿಳಿಸಿದರು. ಈ ನಿಟ್ಟಿನಲ್ಲಿ ಶ್ರಮಿಸಲು ಅವಕಾಶ ಮಾಡಿಕೊಟ್ಟ ಎಲ್ಲರಿಗೂ ಕೃತಜ್ಞತಾ ಪೂರ್ವಕವಾಗಿ ಧನ್ಯವಾದಗಳು ತಿಳಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ, ಎಂ.ಪಿ ರೇಣುಕಾಚಾರ್ಯ, ಹಿಂದುಳಿದ ವರ್ಗಗಳ ರಾಜ್ಯ ಪ್ರಧಾನ ಕಾರ್ಯದರ್ಶಿ ಸೋಮಶೇಖರ್, ಉಪಾಧ್ಯಕ್ಷರಾದ ಗೋವಿಂದ ರಾಜು, ವಿವೇಕಾನಂದ ಡಬ್ಬಿ ಮತ್ತಿತರರು ಉಪಸ್ಥಿತರಿದ್ದರು.