ರಾಷ್ಟ್ರದ ಹಿತದೃಷ್ಟಿಯಿಂದ ಮತದಾರರು ಬಿಜೆಪಿಯನ್ನು ಬೆಂಬಲಿಸಿ :  ಪಿಳ್ಳಮುನಿಶಾಮಪ್ಪ 

ರಾಷ್ಟ್ರದ ಹಿತದೃಷ್ಟಿಯಿಂದ ಮತದಾರರು ಬಿಜೆಪಿಯನ್ನು ಬೆಂಬಲಿಸಿ :  ಪಿಳ್ಳಮುನಿಶಾಮಪ್ಪ 

ದೇವನಹಳ್ಳಿ: ರಾಷ್ಟ್ರದ ಹಿತದೃಷ್ಟಿಯಿಂದ ಎಲ್ಲರೂ ಬಿಜೆಪಿಯನ್ನು ಬೆಂಬಲಿಸಬೇಕು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಮಾಡಿಕೊಂಡಿರುವುದರಿಂದ ಅತಿ ಹೆಚ್ಚು ಅಂತರದಿಂದ ಎನ್ ಡಿಎ ಅಭ್ಯರ್ಥಿ ಕೆ.ಸುಧಾಕರ್ ಗೆಲ್ಲಲಿದ್ದಾರೆ. ನರೇಂದ್ರ ಮೋದಿಯವರನ್ನು ಮತ್ತೆ ಪ್ರಧಾನಿಯಾಗಿಸುವುದೇ ಪಕ್ಷದ ಎಲ್ಲರ ಸಂಕಲ್ಪ ಎಂದು ಮಾಜಿ ಶಾಸಕ ಪಿಳ್ಳ ಮುನಿಶಾಮಪ್ಪ ತಿಳಿಸಿದ್ದಾರೆ.ದೇವನಹಳ್ಳಿ ತಾಲ್ಲೂಕಿನ ವೆಂಕಟಗಿರಿಕೋಟೆಯಲ್ಲಿ ಮತಯಾಚನೆ ನಡೆಸಿ ಬಿಜೆಪಿ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ನರೇಂದ್ರ ಮೋದಿಯವರನ್ನು ಮತ್ತೆ ಪ್ರಧಾನಿಯಾಗಿಸುವುದು ನಮ್ಮ ಗುರಿ. ದೇಶದಲ್ಲಿನ ಬಡತನ, ನಿರುದ್ಯೋಗ ಸೇರಿದಂತೆ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತು ನೀಡಿ ಗ್ರಾಮಾಂತರ ಪ್ರದೇಶಗಳ ಕಲ್ಯಾಣಕ್ಕೆ ಬಿಜೆಪಿ ಅಪಾರವಾದ ಕೊಡುಗೆ ನೀಡಿದೆ.ಬಿಜೆಪಿಯ ಚುನಾವಣಾ ಪ್ರಣಾಳಿಕೆಯಲ್ಲಿ ಮಣ್ಣಿನ ಆರೋಗ್ಯ ಕಾರ್ಡ್‌ಗಳು, ಸೂಕ್ಷ್ಮ ನೀರಾವರಿ, ಬೆಳೆ ವಿಮೆ, ಬೀಜ ಪೂರೈಕೆ ಮತ್ತು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ನೇರ ಆರ್ಥಿಕ ನೆರವು ಸೇರಿದಂತೆ ವಿವಿಧ ಉಪಕ್ರಮಗಳೊಂದಿಗೆ ರೈತರನ್ನು ಸಬಲಗೊಳಿಸುವ ಪ್ರಮುಖ ಅಂಶಗಳನ್ನು ಈ ಬಾರಿಯ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಲಾಗಿದೆ ಅದೇ ರೀತಿ ಈ ಬಾರಿಯ ಚುನಾವಣೆಯು ಒಂದು ರಾಷ್ಟ್ರ, ಒಂದು ಚುನಾವಣೆ, ಮತ್ತು ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಅತ್ಯಂತ ಮಹತ್ವ ಪಡೆದಿದೆ, ಜೂನ್ 4 ರ ಚುನಾವಣಾ ಫಲಿತಾಂಶದ ನಂತರ ಪ್ರಣಾಳಿಕೆಯಲ್ಲಿ ಹೇಳಿದಂತಾ ಅಂಶಗಳನ್ನು ಜಾರಿಗೊಳಿಸುವುದನ್ನು ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಗುರಿಯನ್ನಾಗಿಸಿ ಸಂಕಲ್ಪ ಮಾಡಿದ್ದಾರೆ ಎಂದು ಕರೆ ನೀಡಿದರು. 
ಈ ಸಂದರ್ಭದಲ್ಲಿ ವೆಂಕಟಗಿರಿಕೋಟೆ ಎನ್ ಡಿಎ ಬೆಂಬಲಿತ ಮುಖಂಡರಾದ ಈರಪ್ಪ, ಆಂಜಿನಪ್ಪ, ಬುಳ್ಳಹಳ್ಳಿ ರಾಜಪ್ಪ, ಗುರಪ್ಪ, ಹನುಮಂತಪ್ಪ, ಕದಿರಪ್ಪ, ವೆಂಕಟೇಶ್, ಮುನಿಕೃಷ್ಣಪ್ಪ, ಮುನಿರಾಜು, ಶ್ರೀನಿವಾಸ್, ತಿರುಮಳೇಶ್  ಸಾವಕನಹಳ್ಳಿ ಶ್ರೀನಿವಾಸ್ ಮುಂತಾದ ಮುಖಂಡರುಗಳು ಕಾರ್ಯಕರ್ತರು ಹಾಜರಿದ್ದರು.