ವಿವಿಧ ಪಕ್ಷ ತೊರೆದು 40 ಕ್ಕೂ ಕಾರ್ಯಕರ್ತರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ

Apr 6, 2026 - 14:13
 0  1
ವಿವಿಧ ಪಕ್ಷ ತೊರೆದು 40 ಕ್ಕೂ ಕಾರ್ಯಕರ್ತರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ

 ಸಂತೆಮರಹಳ್ಳಿ : ಇಲ್ಲಿನ ಪ್ರವಾಸಿ ಮಂದಿರದಲ್ಲಿ ಜೆಡಿಎಸ್ ಮುಖಂಡ ಬಿ ಪುಟ್ಟಸ್ವಾಮಿ ಅದ್ಯಕ್ಷತೆಯಲ್ಲಿ ಹಲವಾರು ಯುವ ಕಾರ್ಯಕರ್ತರು ವಿವಿಧ ಪಕ್ಷಗಳನ್ನು ತೊರೆದು ನೂತನವಾಗಿ  ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.

ಸುಮಾರು 45 ರಿಂದ 50 ಯುವಕರು  ವಿವಿಧ ಪಕ್ಷಗಳನ್ನ ತೊರೆದು ಜೆಡಿಎಸ್ ಪಕ್ಷ ಸೇರ್ಪಡೆಯಾಗುವ ಮುಕಾಂತರ ಮುಂಬರುವ ಕೊಳ್ಳೇಗಾಲ ವಿಧಾನ ಸಭೆ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ತಳ ಮಟ್ಟದಲ್ಲಿ ಬಲ ಪಡಿಸುವ ಉದ್ದೇಶದಿಂದ ಈಗಾಗಲೇ ಹೋಬಳಿ ಮಟ್ಟದಲ್ಲಿ ಜೆಡಿಎಸ್ ಪಕ್ಷಕ್ಕೆ ಬೆಂಬಲ ನೀಡಿ ತಾವೇ ಸ್ವತಃ    ಸೇರ್ಪಡೆಯಾಗುವುದರಿಂದ ಆನೆ ಬಲ ಬಂತಂತಾಗಿದೆ ಎಂದು ಜೆಡಿಎಸ್ ಮುಖಂಡ ಬಿ ಪುಟ್ಟಸ್ವಾಮಿ ತಿಳಿಸಿದರು. 

ನಂತರ ನೂತನವಾಗಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದ ಯುವ ಮುಖಂಡ ಪ್ರಸಾದ್ ಬಳೆಪೇಟೆ ಮಾತನಾಡಿ ಕೊಳ್ಳೇಗಾಲ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷವನ್ನು ಬಲ ಪಡಿಸುವ ಉದ್ದೇಶದಿಂದ ವಿವಿಧ ಪಕ್ಷಗಳನ್ನು ತೊರೆದು ನನ್ನ ಜೊತೆ 40 ಕ್ಕೂ ಹೆಚ್ಚು ಯುವಕರು ಜೆಡಿಎಸ್ ಪಕ್ಷದ ಸಿದ್ದಂತವನ್ನು ಒಪ್ಪಿ  ಬಿ ಪುಟ್ಟಸ್ವಾಮಿ ಅಧ್ಯಕ್ಷತೆಯಲ್ಲಿ ಜೆಡಿಎಸ್ ಪಕ್ಷವನ್ನು ಸೇರ್ಪಡೆಯಾಗಿರುವುದಾಗಿ ಈ ಸಂದರ್ಭದಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ಅಭಿಜಿತ್, ಕಾಂತರಾಜ್, ಸಂಜಯ್, ಸುಭಾಷ್, ಶಿವಕುಮಾರ್,ಹರ್ಷ, ಗೌತಮ್, ನಂದನ್ ಸೇರಿದಂತೆ 40 ಕ್ಕೂ ಹೆಚ್ಚು ಕಾರ್ಯಕರ್ತರು ಜೆಡಿಎಸ್ ಪಕ್ಷಕ್ಕೆ  ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ಮುಖಂಡರಾದ ಬೆಳ್ಳಿಯಪ್ಪ ಮಂಗಳಮ್ಮ ರವೀಶ್ ಸೋಮಣ್ಣ ವೈ ಕೆ ಮೋಳೆ, ಚಂದ್ರ ಶೇಖರ್, ಸಿದ್ದರಾಜ್ ನಾಯ್ಕ್ ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456