ಶ್ರೀ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಗ್ರಾಮದ ಯುವ ಮುಖಂಡರಿಂದ ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ

ಶ್ರೀ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಗ್ರಾಮದ ಯುವ ಮುಖಂಡರಿಂದ ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ

ಶ್ರೀ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಗ್ರಾಮದ ಯುವ ಮುಖಂಡರಿಂದ ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ

ಕೋಲಾರ: ಹಿಂದೂಗಳ ಹೃದಯ ಸಾಮ್ರಾಟ್ ಶ್ರೀರಾಮ ಲಲ್ಲಾನ ಪ್ರಾಣ ಪ್ರತಿಷ್ಠಾಪನಾ ಪ್ರಯುಕ್ತ ನರಸಾಪುರ ಹೋಬಳಿಯ ಉದ್ದಪ್ಪನಹಳ್ಳಿ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಗ್ರಾಮದ ಯುವ ಮುಖಂಡರಿಂದ ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ ಮತ್ತು ಶ್ರೀ ರಾಮ ದೇವರ ಮೆರವಣಿಗೆ ನಡೆಯಿತು. ಶ್ರೀರಾಮನ ಜನ್ಮಸ್ಥಳವಾದ ಅಯೋಧ್ಯೆಯಲ್ಲಿ ಭವ್ಯವಾದ ರಾಮ ಮಂದಿರದಲ್ಲಿ ಮರ್ಯಾದ ಪುರುಷೋತ್ತಮ ಹಿಂದೂಗಳ ಹೃದಯ ಸಾಮ್ರಾಟ್ ಶ್ರೀರಾಮ ಲಲ್ಲಾನ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ನಡೆಯುವ ಸಲುವಾಗಿ ತಾಲೂಕಿನ ನರಸಾಪುರ ಹೋಬಳಿಯ ಉದ್ದಪ್ಪನಹಳ್ಳಿ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಾಲಯದಲ್ಲಿ ದೇವರಿಗೆ ಹೂವಿನ ಅಲಂಕಾರ, ವಿಶೇಷ ಪೂಜೆ, ಮಹಾ ಮಂಗಳಾರತಿ ಹಾಗೂ ಭಕ್ತಾದಿಗಳಿಗೆ ಮಜ್ಜಿಗೆ, ಪಾನಕ, ಮತ್ತು ಅನ್ನಸಂತರ್ಪಣೆ ಜೊತೆಗೆ ಶ್ರೀರಾಮ ದೇವರ ಮೆರವಣಿಗೆ ಸಹ ನೆರವೇರಿಸಿದರು. ಇದೇ ಸಂದರ್ಭದಲ್ಲಿ ಉದ್ದಪ್ಪನಹಳ್ಳಿ ಗ್ರಾಮದ ಯುವ ಮುಖಂಡರಾದ ನವೀನ್ ಗೌಡ ರವರು ಮಾತನಾಡಿ ಶ್ರೀ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಬೆಳಿಗ್ಗೆಯಿಂದಲೇ ಪೂಜೆ ಪುನಸ್ಕಾರಗಳು ಜರಗುತ್ತಿದ್ದು ನಮ್ಮ ಉದ್ದಪ್ಪನಹಳ್ಳಿ ಮತ್ತು ಸುತ್ತಮುತ್ತಲಿನ ಎಲ್ಲಾ ಭಾಗದ ಭಕ್ತಾದಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀರಾಮನ ಕೃಪೆಗೆ ಪಾತ್ರರಾಗಿರುವುದು ನಮಗೆಲ್ಲಾ ಸಂತೋಷ ತಂದಿದೆ,ಇದೇ ರೀತಿ ಈ ದಿನ ಸಂಜೆ ಎಲ್ಲರೂ ಪ್ರತಿ ಮನೆಯಲ್ಲೂ ರಾಮ ಜ್ಯೋತಿ ಬೆಳಗಿಸುವ ಮೂಲಕ ಶ್ರೀರಾಮನ ಕೃಪೆಗೆ ಪಾತ್ರರಾಗಬೇಕೆಂದು ಎಲ್ಲರಲ್ಲೂ ಮನವಿ ಮಾಡಿದರು. ಈ ಸಂದರ್ಭದಲ್ಲಿ ನವೀನ್ ಗೌಡ , ಶೇಖರ್, ಎಸ್.ಬಿಪಿ ನಾರಾಯಣಸ್ವಾಮಿ, ಕಿರಣ್, ಮುನಿರಾಜಪ್ಪ, ರವಿ, ಮುನಿರಾಜು, ಚಂದ್ರು, ನಾಗೇಶ್, ಹಾಗೂ ಉದ್ದಪ್ಪನಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ಭಾಗವಹಿಸಿದ್ದರು.