ಶ್ರೀ ಗುರು ರಾಘವೇಂದ್ರ ವೈಭವೋತ್ಸವ-2026

Feb 20, 2026 - 10:47
Feb 20, 2026 - 11:16
 0  6
ಶ್ರೀ ಗುರು ರಾಘವೇಂದ್ರ ವೈಭವೋತ್ಸವ-2026

    ಬೆಂಗಳೂರು: ತ್ಯಾಗರಾಜನಗರದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ 'ಕಲಿಯುಗ ಕಾಮಧೇನು' ಶ್ರೀ ರಾಘವೇಂದ್ರ ಗುರುಸಾರ್ವಭೌಮರ ಪಟ್ಟಾಭಿಷೇಕ ಮತ್ತು ವರ್ಧಂತಿ ಉತ್ಸವದ ಅಂಗವಾಗಿ ಫೆಬ್ರವರಿ 19 ರಿಂದ 24ರ ವರೆಗೆ ವಿವಿಧ ಧಾರ್ಮಿಕ/ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಅವುಗಳ ವಿವರಗಳು ಈ ರೀತಿ ಇವೆ :
ಫೆಬ್ರವರಿ 19, ಗುರುವಾರ (ರಾಯರ ಪಟ್ಟಾಭಿಷೇಕ) : ಬೆಳಗ್ಗೆ 8-00 ರಿಂದ ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಅಷ್ಟೋತ್ತರ ಪಾರಾಯಣ ಸಹಿತ ಫಲ-ಪಂಚಾಮೃತ ಅಭಿಷೇಕ,ಶ್ರೀ ಶ್ರೀ ಸುವಿದ್ಯೇಂದ್ರತೀರ್ಥ ಶ್ರೀಪಾದಂಗಳವರಿಂದ ಸಂಸ್ಥಾನ ಪೂಜೆ ಮತ್ತು ಅನುಗ್ರಹ ಸಂದೇಶ. ಸಂಜೆ 6-00ಕ್ಕೆ ಡಾ| ರಾಯಚೂರು ಶೇಷಗಿರಿದಾಸ್ ಮತ್ತು ಸಂಗಡಿಗರಿಂದ "ದಾಸ ವೈಭವ". ಗಾಯನ ಕಾರ್ಯಕ್ರಮ.

ಫೆಬ್ರವರಿ 20 ರಿಂದ 23ರ ವರೆಗೆ ಪ್ರತಿದಿನ ಬೆಳಗ್ಗೆ ಪೂಜಾ ಕೈಂಕರ್ಯಗಳು, ಸಂಜೆ ವಿವಿಧ ಭಜನಾ ಮಂಡಳಿಗಳ ಸದಸ್ಯರುಗಳಿಂದ "ಭಜನಾಮೃತ" ನಡೆಯಲಿದೆ.
ಫೆಬ್ರವರಿ 24, ಮಂಗಳವಾರ (ರಾಯರ ವರ್ಧಂತಿ ಉತ್ಸವ) : ಬೆಳಗ್ಗೆ-ಫಲ-ಪಂಚಾಮೃತ ಅಭಿಷೇಕ, ಶ್ರೀ ಗುರುರಾಜರಿಗೆ "ಲಕ್ಷ ಪುಷ್ಪಾರ್ಚನೆ" ವಿದ್ವಾಂಸರಿಂದ "ರಾಯರ ಮಹಿಮೆ" ವಿಷಯವಾಗಿ ಧಾರ್ಮಿಕ ಪ್ರವಚನ. ಸಂಜೆ 6-00ಕ್ಕೆ ವಿದ್ವಾನ್ ಶ್ರೀ ಅನಂತ ಮಿಸ್ತ್ರಿ ಮತ್ತು ಸಂಗಡಿಗರಿಂದ "ದಾಸ ತರಂಗಿಣಿ" ಗಾಯನ ಕಾರ್ಯಕ್ರಮ. ನಂತರ ಸಮಾರೋಪ ಸಮಾರಂಭ ಜರುಗಲಿದೆ ಎಂದು ಶ್ರೀಮಠದ ಪದಾಧಿಕಾರಿಗಳು ತಿಳಿಸಿದ್ದಾರೆ.

What's Your Reaction?

Like Like 2
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456