ಸಮಾಜ ಸೇವೆಯಿಂದ ಹಿಂದೇ ಸರಿಯುವ ಗುಣ ನನ್ನಲ್ಲಿ ಇಲ್ಲ-ಸಮಾಜ ಸೇವಕ ಸಿ.ಮುನಿರಾಜು

Aug 26, 2025 - 13:04
 0  15
ಸಮಾಜ ಸೇವೆಯಿಂದ ಹಿಂದೇ ಸರಿಯುವ ಗುಣ ನನ್ನಲ್ಲಿ ಇಲ್ಲ-ಸಮಾಜ ಸೇವಕ ಸಿ.ಮುನಿರಾಜು

ಭಾಗ್ಯನಗರ: ಆದಿ ಅನಾದಿ ಕಾಲದಿಂದಲೂ ನಮ್ಮ ಹಿಂದೂಗಳ ಗಣೇಶ್ ಚತುರ್ಥಿ ಸಂಪ್ರದಾಯಕ ಹಬ್ಬವಾಗಿದ್ದು ಯುವಕರ ಉತ್ಸಾಹಕ್ಕಾಗಿ ಸುಮಾರು 5  ವರ್ಷಗಳಿಂದ ಪ್ರತಿಯೊಂದು ಗ್ರಾಮಕ್ಕೂ ಗಣೇಶ ಮೂರ್ತಿಗಳ ವಿತರಣೆ ಮಾಡಲಾಗುತ್ತಿದೆ ಎಂದು ಸಮಾಜ ಸೇವಕ ಹಾಗು ಬಿಜೆಪಿ ರಾಜ್ಯ ಕಾರ್ಯದರ್ಶಿ ಸಿ.ಮುನಿರಾಜು ತಿಳಿಸಿದ್ದಾರೆ.

ಪಟ್ಟಣದ ಹೊರವಲಯದ ಟಿ.ಬಿ.ಕ್ರಾಸ್‌ನಲ್ಲಿರುವ ಗೃಹ ಕಚೇರಿಯಲ್ಲಿ ಬಿಜೆಪಿ ಮುಖಂಡ ಸಿ.ಮುನಿರಾಜು ಬಾಗೇಪಲ್ಲಿ, ಗುಡಿಬಂಡೆ, ಚೇಳೂರು ತಾಲೂಕುಗಳ ನೂರಾರು ಯವಕರಿಗೆ ಗೌರಿ ಗಣೇಶ ಹಬ್ಬದ ಪ್ರಯುಕ್ತ 400 ಕ್ಕೂ ಹೆಚ್ಚು ಗಣೇಶ ಮೂರ್ತಿಗಳನ್ನು ವಿತರಿಸಿ ಹಬ್ಬದ ಶುಭಾಷಯ ಕೋರಿ ಮಾತನಾಡಿ ಹಿಂದೂ ಯುವಕರಿಗೆ ಶಕ್ತಿ ಹಾಗೂ ಸ್ಪೂರ್ತಿಯನ್ನು ತುಂಬುವ ಕೆಲಸ ಗೌರಿ ಗಣೇಶ ಹಬ್ಬದಲ್ಲಿ ನಡೆಯುತ್ತದೆ. ಚುನಾವಣೆಯಲ್ಲಿ ಸೋತಷ್ಟಕ್ಕೆ ಸಮಾಜ ಸೇವೆಯಿಂದ ಹಿಂದೇ ಸರಿಯುವ ಗುಣ ನನ್ನಲ್ಲಿ ಇಲ್ಲ ಸದಾ ಕ್ಷೇತ್ರದ ಜನರ ಸೇವೆಯಲ್ಲಿ ನಿರತನಾಗಿ ಬಿಜೆಪಿ ಪಕ್ಷವನ್ನು ಬಲಿಷ್ಠವಾಗಿ ಕಟ್ಟುವ ಮೂಲಕ ಈ ಕ್ಷೇತ್ರದಲ್ಲಿ ಅಧಿಕಾರ ಚುಕ್ಕಾಣಿ ಹಿಡಿಯುತ್ತೇವೆ ಎಂದರು.

ಈ ಸಂಧರ್ಭದಲ್ಲಿ ಬಿಜೆಪಿ ಮಂಡಲಧ್ಯಕ್ಷ ಆರ್. ಪ್ರತಾಪ್,ಗುಡಿಬಂಡೆ ಬಿಜೆಪಿ ಮಂಡಲಧ್ಯಕ್ಷ ಗೆಂಗಿರೆಡ್ಡಿ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಸುಧಾಕರ್ ರೆಡ್ಡಿ,ಬಿಜೆಪಿ ಮುಖಂಡರಾದ ಕೆ.ಟಿ.ವೀರಾಂಜಿನೇಯಲು,ಚಿನ್ನಪೂಜಪ್ಪ,ವೆಂಕಟರೆಡ್ಡಿ, ಆರ್.ವೆಂಕಟೇಶ್, ಪುಲಗಲ್ ಪ್ರತಾಪ್‌ರೆಡ್ಡಿ, ಗಂಗರಾಜು, ಕೊತ್ತಕೋಟೆ ಲೋಕೇಶ್, ಸೆಂಟ್ರಿಂಗ್ ಶ್ರೀನಿವಾಸ್,ಜಿನ್ನಿ, ಗೋಪಿ, ಮಂಜುಳಾ, ರೂಪ,ಡಿ.ಎಸ್.ಎಸ್. ನಾಗ, ಶ್ರೀನಿವಾಸ್, ರಂಗಾರೆಡ್ಡಿಸೇರಿದಂತೆ ಇತರರು ಇದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456