ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವವು ಎಸ್ ಡಿಎಂಸಿ ಅಧ್ಯಕ್ಷರಾದ ಸಾಸಲು ರಮೇಶ್ ನೇತೃತ್ವದಲ್ಲಿ ಅದ್ದೂರಿಯಾಗಿ ನೆಡೆಯಿತು. ಕೃಷ್ಣರಾಜಪೇಟೆ ತಾಲ್ಲೂಕಿನ ಕಿಕ್ಕೇರಿ ಸಮೀದ ಸಾಸಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವವನ್ನು ಶ್ರೀ ಸೋಮೇಶ್ವರ ದೇವಾಲಯ ಆವರಣದಲ್ಲಿ ಶಾಲೆಯ ಅದ್ಯಕ್ಷ ಸಾಸಲು ರಮೇಶ್ ಅಧ್ಯಕ್ಷತೆಯಲ್ಲಿ  ಆಯೋಜನೆ ಮಾಡಲಾಗಿತ್ತು. ಶ್ರೀ ಶ್ರೀ ಶ್ರೀ ಶಿವಕುಮಾರ್  ಸ್ವಾಮೀಜಿಯ ಭಾವಚಿತ್ರಕ್ಕೆ ವಿಷೇಶ ಪೂಜೆ ಸಲ್ಲಿಸಿ ಶ್ರೀ ರಾಮನನ್ನು ಸ್ಮರ್ಣಿಸಿ ಕಾರ್ಯಕ್ರಮಕ್ಕೆ ಚಾಲನೆ  ನೀಡಲಾಯಿತು  ಮಕ್ಕಳ ನೃತ್ಯ ಸೇರಿದಂತೆ ಕ್ರೀಡಾ ಸ್ಪರ್ದೆಯಲ್ಲಿ ಪ್ರಥಮ ಸ್ಥಾನ, ಎರಡನೇ ಸ್ಥಾನ, ಮೂರನೇ ಸ್ಥಾನಗಳಲ್ಲಿ ಗೆಲುವು ಸಾಧಿಸಿ ಮಕ್ಕಳಿಗೆ ಬಹುಮಾನ ನೀಡಲಾಯಿತು. ಕಾರ್ಯಕ್ರಮದಲ್ಲಿ ಬಿ ಆರ್ ಸಿ  ಮಂಜುನಾಥ್,  ಎಸ್ ಡಿ ಎಂ ಸಿ ಅಧ್ಯಕ್ಷ ರಮೇಶ್, ವೀರಶೈವ ಲಿಂಗಾಯತ ಮಹಾವೇದಿಕೆ ಅಧ್ಯಕ್ಷರಾದ  ಸಾಸಲು ಗುರುಮೂರ್ತಿ, ಗ್ರಾಮ ಪಂಚಾಯತಿ ಅದ್ಯಕ್ಷೆ ಸುಧಾ ದೇವರಾಜು,  ಉಪಾದ್ಯಕ್ಷೆ ಭಾಗಮ್ಮ ಆಶೋಕ್,  ಸದಸ್ಯ ಈರಾಜು, ಕವಿತಾ, ದೇವರಾಜು, ಮುಖ್ಯ ಶಿಕ್ಷಕಿ ಕುಮಾರಿ,  ಶಿಕ್ಷಕ ಹೇಮಣ್ಣ,  ಪಿ.ಡಿ.ಓ ವಿಜಯ್ ಕುಮಾರ್,  ಶಿಕ್ಷಣ ಸಂಯೋಜಕ ವೀರಭದ್ರಯ್ಯ, ಪರಿಸರಪ್ರೇವಿ ಲವಕುಮಾರ್,  ಶಿಕ್ಷಕರಾದ ಶಾಂತಪ್ಪ, ಗೋವಿಂದರಾಜ್, ದೀನೇಶ್, ರಮೇಶ್ ಸೇರಿದಂತೆ ಮತ್ತಿತ್ತರರು ಇದ್ದರು.