ಸುಂದರಪಾಳ್ಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಎನ್. ಎಸ್. ಎಸ್ ಶಿಬಿರ ಆಯೋಜನೆ

Sep 22, 2025 - 18:15
 0  12
ಸುಂದರಪಾಳ್ಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಎನ್. ಎಸ್. ಎಸ್ ಶಿಬಿರ ಆಯೋಜನೆ

ಬೇತಮಂಗಲ:  ಸಮೀಪದ ವೆಂಗಸಂದ್ರ ಗ್ರಾಪಂ ವ್ಯಾಪ್ತಿಯ ಗೋಪೆನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಸುಂದರಪಾಳ್ಯ ವಿದ್ಯಾರ್ಥಿಗಳ ವತಿಯಿಂದ ರಾಷ್ಟ್ರೀಯ  ಸೇವಾ ಯೋಜನೆ ಶಿಬಿರವನ್ನು ಆಯೋಜನೆ ಮಾಡಲಾಗಿತ್ತು.

ವಿದ್ಯಾರ್ಥಿಗಳು ರಾಷ್ಟ್ರೀಯ ಸೇವಾ ಯೋಜನೆಯು ಕಾಲೇಜು ಮಟ್ಟದ ವಿದ್ಯಾರ್ಥಿಗಳಲ್ಲಿ ಪ್ರತಿಯೊಂದು ಹಂತದಲ್ಲೂ ಬದಲಾವಣೆ ತರುತ್ತದೆ. ಸ್ವಯಂ ಸೇವಕರು ಶ್ರಮದ ಮಹತ್ವ ಅರಿತು ಗೌರವ ನೀಡುವುದನ್ನು ಕಲಿಯುತ್ತಾರೆ ಎಂದು ಕಾಲೇಜು ಪ್ರಾದ್ಯಪಕರು ತಿಳಿಸಿದರು.

ವಿದ್ಯಾರ್ಥಿಗಳು ಕಲಿಕಾ ಹಂತದಿಂದಲೇ ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು ಆಗಲೇ ಸಮಾಜದಲ್ಲಿ ಉತ್ತಮ ಪ್ರಜೆಯಾಗಲು ಸಾಧ್ಯ ಎಂದರು.

ಶಿಬಿರಾರ್ಥಿಗಳು ಗ್ರಾಮದಲ್ಲಿ ಬೆಳಗ್ಗಿನಿಂದ ಚರಂಡಿ. ಕಸದ ಗುಂಡಿಗಳು. ಸೇರಿದಂತೆ ಹಲುವು ಕಡೆ ಗ್ರಾಮದ ಸ್ವಚ್ಛತೆ ಯನ್ನು ಕಾಪಾಡುವಲ್ಲಿ ತೊಡಗಿದ್ದರು ಶ್ರಮದಾನ ಮುಗಿದ ಮೇಲೆ ಸಾಯಂಕಾಲ ಗ್ರಾಮದಲ್ಲಿ ಸಾರ್ವಜನಿಕರನ್ನು ಮನೋರಂಜಿಸಲು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು.

ಈ ಸಂದರ್ಭದಲ್ಲಿ ಡಾ. ಸಂತೋಷ್ ಮಿಶ್ರ. ಮಂಜುನಾಥ್, ಸಂಜೀವ್, ಗೋವಿಂದ್ ಗೌಡ, ಗೋಪಾಲ್ ಕೃಷ್ಣ, ದೇವರಾಜ್, ಸೋಮಶೇಖರ್, ಮುರಳಿಧರ್, ರಾಜೇಶ್, ಪೃಥ್ವಿ, ರಾಘವೇಂದ್ರ, ಮಂಜುನಾಥ್, ಅನಿತಾ ಹಜಿರಾ, ಸೇರಿದಂತೆ ಶಿಬಿರಾರ್ಥಿಗಳು ಸಾರ್ವಜನಿಕರು ಹಾಗೂ ಗ್ರಾಮಸ್ಥರು ಇದ್ದರು.

What's Your Reaction?

Like Like 2
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456