ಹರಿದಾಸ ವೈಭವ
ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್.ಕೆ.ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಮೇ 9, ಗುರುವಾರ ಸಂಜೆ 7-30ಕ್ಕೆ "ಹರಿದಾಸ ವೈಭವ" ಗಾಯನ ಕಾರ್ಯಕ್ರಮ ಏರ್ಪಡಿಸಿದ್ದು, ಈ ಕಾರ್ಯಕ್ರಮದಲ್ಲಿ ಶ್ರೀಮತಿ ಐಶ್ವರ್ಯ ಶ್ರೀನಿಧಿ ಕುಲಕರ್ಣಿ ಇವರ ಗಾಯನಕ್ಕೆ ಕು||ಸೃಷ್ಟಿ ದೇಸಾಯಿ ಹಾರ್ಮೋನಿಯಂ ವಾದನದಲ್ಲಿ ಹಾಗೂ ಚಿ||ಋತುಪರ್ಣ ದೇಸಾಯಿ ತಬಲಾ ವಾದನದಲ್ಲಿ ಸಾಥ್ ನೀಡಲಿದ್ದಾರೆ ಎಂದು ಶ್ರೀ ನಂದಕಿಶೋರ್ ಆಚಾರ್ ಅವರು ತಿಳಿಸಿದ್ದಾರೆ.