ಹಿರಿಯ ಚಿಂತಕ ಜೆ ಕೆ ಹುಸೇನ್ ಮಿಯಾ ಸಾಬ್ ರವರ ನಿಧನಕ್ಕೆ ಜಿಲ್ಲಾ ಕಸಾಪದಿಂದ ಕಂಬನಿ

Apr 20, 2026 - 18:37
 0  3
ಹಿರಿಯ ಚಿಂತಕ ಜೆ ಕೆ ಹುಸೇನ್ ಮಿಯಾ  ಸಾಬ್ ರವರ ನಿಧನಕ್ಕೆ ಜಿಲ್ಲಾ ಕಸಾಪದಿಂದ ಕಂಬನಿ
ಸುದ್ದಿ ಕಿರಣ ನ್ಯೂಸ್ ಡೆಸ್ಕ್

ದಾವಣಗೆರೆ ಏಪ್ರಿಲ್ 20.

 ಸಿರಿಗೆರೆಯ ಶ್ರೀ ತರಳಬಾಳು ಜಗದ್ಗುರು ವಿದ್ಯಾ ಸಂಸ್ಥೆಯ ಆಶಯದಲ್ಲಿ ನಡೆಯುತ್ತಿರುವ ವಿವಿಧ ಪ್ರೌಢಶಾಲೆಗಳಲ್ಲಿ ಮುಖ್ಯೋಪಾಧ್ಯಾಯರಾಗಿ ಅವಿರತ ಸೇವೆ ಸಲ್ಲಿಸಿ ನಿವೃತ್ತಿಯ ನಂತರ 

ಜಗಳೂರುನ ಹಿರಿಯ ಚೇತನರಾಗಿದ್ದ ಶ್ರೀ ಜೆ.ಎಂ.ಇಮಾಂ ಸಾಬ ರವರ ಹೆಸರಿನಲ್ಲಿ 

ಜಗಳೂರು ಶ್ರೀ ಜೆ.ಎಂ. ಇಮಾಂ ಟ್ರಸ್ಟ್ ಸ್ಥಾಪಿಸಿ ಅದರ ಅಧ್ಯಕ್ಷರಾಗಿ , ಜೆ.ಎಂ. ಇಮಾಂ ಸ್ಮಾರಕ ಶಾಲೆಯ ಸಂಸ್ಥಾಪಕರು ಹಿರಿಯರು,ಶಿಕ್ಷಣ ಪ್ರೇಮಿಗಳೂ ಸಾಹಿತ್ಯ ಪ್ರೇಮಿಗಳೂ.ಹಿರಿಯ ಚಿಂತಕರು ಆಗಿದ್ದ ಶ್ರೀ ಜೆ.ಕೆ.ಹುಸೇನ್ ಮಿಯ್ಯಾ ರವರು ಇಂದು ಬೆಳಗ್ಗೆ 7.30 ಗಂಟೆಗೆ ನಿಧನರಾಗಿರುವುದು ಅತ್ಯಂತ ಆಘಾತವನ್ನು ಉಂಟು ಮಾಡಿದೆ .

ಶ್ರೀಯುತರು ಬಸವ ಕೇಂದ್ರ, ಬಯಲು ಸಾಹಿತ್ಯ ವೇದಿಕೆ , ಕನ್ನಡ ಸಾಹಿತ್ಯ ಪರಿಷತ್ ಹಾಗೂ ಲಯನ್ಸ್ ಕ್ಲಬ್ ಸೇರಿದಂತೆ ಹಲವಾರು ಸಂಘ ಸಂಸ್ಥೆಗಳಲ್ಲಿ ಗಣನೀಯವಾಗಿ ಸೇವೆ ಸಲ್ಲಿಸಿರುತ್ತಾರೆ.

ಶ್ರೀಯುತರು ,ಕುಟುಂಬ ವರ್ಗ,ಸ್ನೇಹಿತರು, ಶಿಕ್ಷಕರು, ಮಕ್ಕಳು, ಶಿಷ್ಯ ವೃಂದ ಹಾಗೂ ಬಂಧು ಮಿತ್ರರನ್ನು ಅಗಲಿರುತ್ತಾರೆ. 

 ಅವರು ಕನ್ನಡ ಸಾಹಿತ್ಯ ಪರಿಷತ್ತಿನೊಂದಿಗೆ ಸದಾ ಒಡನಾಟ ಇಟ್ಟುಕೊಂಡು ಅತ್ಯುತ್ತಮ ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸಿದ ಕೀರ್ತಿ ಅವರದಾಗಿತ್ತು. ಅವರ ನಿಧನದಿಂದ ಕನ್ನಡ ಸರಸ್ವತ ಲೋಕಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಬಿ ವಾಮದೇವಪ್ಪ ಅವರು ಸ್ಮರಿಸಿ ಕಂಬನಿ ಮಿಡಿದು, ಅವರ ಆತ್ಮಕ್ಕೆ ಚಿರಶಾಂತಿ ಕೋರಿ ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪರವಾಗಿ ಹಾಗೂ ಸಮಸ್ತ ಕನ್ನಡದ ಮನಸ್ಸುಗಳ ಪರವಾಗಿ ಭಾವಪೂರ್ಣ ಶ್ರದ್ಧಾಂಜಲಿಯನ್ನು ಸಮರ್ಪಿಸಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456