ಹೊಳಲು ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಶ್ರೀ ರಾಮನವಮಿ 

Mar 28, 2026 - 17:13
 0  1
ಹೊಳಲು ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಶ್ರೀ ರಾಮನವಮಿ 

     ಮಂಡ್ಯ ತಾಲೂಕು ಹೊಳಲು ಗ್ರಾಮದ ಶ್ರೀ ಎಚ್ ಎಮ್  ನಾಯಕ ಸರ್ಕಲ್ ಶ್ರೀ ಪಿರಿಯಾಪಟ್ಟಲದಮ್ಮ ದೇವಸ್ಥಾನ ಹಾಗೂ ಜಂಗಿ ಮೋಹಲ್ ಸರ್ಕಲ್ ನ
ಶ್ರೀ ಸಿದ್ದಪ್ಪಾಜಿ ದೇವಸ್ಥಾನದಲ್ಲಿ ಶ್ರೀರಾಮ ಭಕ್ತ ಮಂಡಳಿ ಗೆಳೆಯರ ಬಳಗದ ವತಿಯಿಂದ ಶ್ರೀ ರಾಮನವಮಿ ಹಾಗೂ ಮೇಲುಕೋಟೆ ಶ್ರೀ ವೈರಮುಡಿ ಬ್ರಹ್ಮೋತ್ಸವದ ಪ್ರಯುಕ್ತ ಈ ದಿನ ಶ್ರೀ ರಾಮನವಮಿ ಹಬ್ಬವನ್ನು ವಿಜ್ರಂಬಣೆಯಿಂದ ಆಚರಿಸಲಾಯಿತು. ಶ್ರೀರಾಮ ದೇವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಂತರ ಬರುವ ಭಕ್ತಾದಿಗಳಿಗೆ ಮಜ್ಜಿಗೆ ಪಾನಕ, ಕೋಸಂಬರಿ, ಹಾಗೂ ಸಿಹಿ ತಿಂಡಿಯನ್ನು ವಿತರಿಸಲಾಯಿತು.


ನಂತರ ಮಾತನಾಡಿದ ಶ್ರೀರಾಮ ಭಕ್ತ ಮಂಡಳಿಯ ಸದಸ್ಯರು ಮಾತನಾಡುತ್ತಾ ಇಡೀ ದೇಶದಲ್ಲಿ ಈ ದಿನ ಶ್ರೀರಾಮದೇವರ ಪೂಜೆಯನ್ನು ಮಾಡುತ್ತಿದ್ದಾರೆ. ಹಾಗೂ ಮೇಲುಕೋಟೆ ಶ್ರೀ ವೈರಮುಡಿ ಬ್ರಹ್ಮೋತ್ಸವ ಇರುವುದರಿಂದ ಈ ದಿನ ನಾವುಗಳು ಈ ಗ್ರಾಮದಲ್ಲಿ ಶ್ರೀ ರಾಮನವಮಿ ಹಾಗೂ ವೈರಮುಡಿ ಬ್ರಹ್ಮೋತ್ಸವ ಪ್ರಯುಕ್ತ ದೇವರಿಗೆ ವಿಶೇಷ ಪೂಜೆ ಮಾಡಿ ಪಾನಕ, ಮಜ್ಜಿಗೆ, ಕೋಸಂಬರಿ,ವಿತರಿಸಿ ನಂತರ ಗ್ರಾಮದವರಿಗೂ ಹಾಗೂ ದೇಶಕ್ಕೆ ಒಳ್ಳೆಯದಾಗಲಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮೇಲುಕೋಟೆ 
ಶ್ರೀ ವೈರಮುಡಿ ಬ್ರಹ್ಮೋತ್ಸವಕ್ಕೆ ವಾಹನದಲ್ಲಿ ಸಂಚರಿಸುವ ಪ್ರವಾಸಿಗರಿಗೆ ಪಾನಕ ಮಜ್ಜಿಗೆ ವಿತರಿಸಿದರು. 
ಈ ಸಂದರ್ಭದಲ್ಲಿ ಶ್ರೀ ರಾಮ ಭಕ್ತ ಮಂಡಳಿ ಗೆಳೆಯರ ಬಳಗದ ಸದಸ್ಯರಾದ ಕಾರ್ತಿಕ್, ಪವನ್, ರೇವಂತ್ , ಭರತ್, ನವೀನ್  ,ಸಂಜು,  ಶಿವು,ನಿಂಗರಾಜ್, ಮಾಹಿತಿ ಹಾಗೂ ಗ್ರಾಮಸ್ಥರು ಶ್ರೀ ರಾಮ ಸೇವಾ ಸಮಿತಿ ಸದಸ್ಯರುಗಳು ಸೇರಿದಂತೆ  ಮತ್ತಿತರು ಹಾಜರಿದ್ದರು.
ಚಿತ್ರವರದಿ: ಕೆ.ಪಿ.ಕುಮಾರ್, ಹೊಳಲು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456